ಶಿವಸೇನೆ ಉದ್ಧವ್ ಠಾಕ್ರೆ ಬಣ 
ದೇಶ

Maharashtra Elections: ಐವರು ಬಂಡಾಯ ನಾಯಕರ ಉಚ್ಚಾಟಿಸಿದ ಉದ್ಧವ್ ಠಾಕ್ರೆ

ಈ ಚುನಾವಣೆಯಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣ ಮಹಾವಿಕಾಸ್ ಅಘಾಡಿ ಮೈತಿಕೂಟದಿಂದ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಗಳನ್ನು ಇಲ್ಲಿ ಕಣಕ್ಕಿಳಿಸಲಾಗಿದೆ.

ಮುಂಬೈ: ಮಹಾರಾಷ್ಟ್ರ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಶಿವಸೇನೆ ಉದ್ಧವ್ ಠಾಕ್ರೆ ಬಣದಲ್ಲಿ ಬಂಡಾಯದ ಬಿಸಿ ಜೋರಾಗಿದ್ದು, ಐವರು ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಹೌದು.. ಮಹಾರಾಷ್ಟ್ರ ಚುನಾವಣೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳದ ಐವರು ಬಂಡಾಯ ನಾಯಕರನ್ನು ಶಿವಸೇನೆ ಉದ್ಧವ್ ಠಾಕ್ರೆ ಬಣ ಉಚ್ಚಾಟಿಸಿದೆ. ಭಿವಂಡಿ ಮಾಜಿ ಶಾಸಕ ರೂಪೇಶ್ ಮ್ಹಾತ್ರೆ, ವಿಶ್ವಾಸ್ ನಾಂದೇಕರ್, ಚಂದ್ರಕಾಂತ್ ಘುಗುಲ್, ಸಂಜಯ್ ಅವರಿ ಮತ್ತು ಪ್ರಸಾದ್ ಠಾಕ್ರೆ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಚುನಾವಣೆಯಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣ ಮಹಾವಿಕಾಸ್ ಅಘಾಡಿ ಮೈತಿಕೂಟದಿಂದ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಗಳನ್ನು ಇಲ್ಲಿ ಕಣಕ್ಕಿಳಿಸಲಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಗೊಂದಲವಿದ್ದು, ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ ಬಂಡಾಯ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಒಂದು ಗಂಟೆಯ ಸಮಯ ನೀಡಿದ ಹೊರತಾಗಿಯೂ ಅವರು ನಾಮಪತ್ರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ವಿಫಲರಾದ ಬಂಡಾಯಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 35 ಮಿ. ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT