ದೇಶ

ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು.

ಭಾರತೀಯ ವಾಯುಪಡೆಯ (IAF) ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜಸ್ಥಾನದ ನಾಗೌರ್‌ನ MARTA ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಜಾಸ್‌ನಗರದ ಹೊಲಗಳಲ್ಲಿ ಇಳಿದಿದ್ದು ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಜೋಧ್‌ಪುರದಿಂದ ಜೈಪುರಕ್ಕೆ ಹೋಗುತ್ತಿದ್ದಾಗ ಪೈಲಟ್‌ಗೆ ಕೆಲವು ಸಮಸ್ಯೆ ಕಾಣಿಸಿಕೊಂಡಿತು. ಇದರಿಂದಾಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಿತ್ತು. ಸಮಸ್ಯೆ ಸರಿಪಡಿಸಿದ ಬಳಿಕ ಮತ್ತೆ ಹೆಲಿಕಾಪ್ಟರ್ ಟೇಕಾಫ್ ಆಗುತ್ತಿದೆ ಎಂದು ಮೆರ್ಟಾ ಡಿಎಸ್ ಪಿ ರಾಮಕರನ್ ಮಲಿಂದಾ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು. ಇನ್ನು ಕಳೆದ ಸೋಮವಾರ ಬೆಳಗ್ಗೆ ವಾಯುಪಡೆಯ MiG-29 ಯುದ್ಧ ವಿಮಾನವು ದಿನನಿತ್ಯದ ತರಬೇತಿ ಹಾರಾಟದ ಸಮಯದಲ್ಲಿ ತಾಂತ್ರಿಕ ದೋಷದಿಂದ ಉತ್ತರ ಪ್ರದೇಶದ ಆಗ್ರಾ ಬಳಿಯ ಸುನೇಗಾ ಗ್ರಾಮದ ಹೊಲದಲ್ಲಿ ಪತನಗೊಂಡಿತು. ವಿಮಾನ ಪತನಗೊಳ್ಳುವ ಮುನ್ನ ಅದರ ಪೈಲಟ್ ಪ್ಯಾರಾಚೂಟ್ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದರು.

ಅಂದಿನ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಅಧಿಕಾರಿಗಳ ಪ್ರಕಾರ, ವಾಯುಪಡೆಯ ಸುರಕ್ಷತಾ ಆಡಿಟ್ ತಂಡವು ಅಪಘಾತ ಸಂಭವಿಸಿದ ಸ್ಥಳದಿಂದ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಂಪೂರ್ಣ ತನಿಖೆ ನಡೆಸಿತು. ತಂಡದಲ್ಲಿದ್ದ ಅಧಿಕಾರಿಗಳು ಅಪಘಾತವನ್ನು ಕಣ್ಣಾರೆ ಕಂಡವರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ ಎಂದರು. ಅಧಿಕಾರಿಗಳ ಪ್ರಕಾರ, ತಂಡವು ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ಪತ್ತೆಹಚ್ಚಿದೆ, ಅದನ್ನು ತನಿಖೆಗಾಗಿ ಕಳುಹಿಸಲಾಗಿದೆ. ಭದ್ರತಾ ಲೆಕ್ಕ ಪರಿಶೋಧನಾ ತಂಡ ದೆಹಲಿಗೆ ತೆರಳಿ ತನ್ನ ವರದಿಯನ್ನು ರಕ್ಷಣಾ ಸಚಿವಾಲಯಕ್ಕೆ ಸಲ್ಲಿಸಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT