ಶಶಿ ತರೂರ್ 
ದೇಶ

ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿರುವುದು ಭಾರತಕ್ಕೆ ಒಳ್ಳೆಯದು: ಶಶಿ ತರೂರ್ ಕೊಟ್ಟ ಕಾರಣ ಇಷ್ಟು...!

ಟ್ರಂಪ್ ಅಧಿಕಾರಕ್ಕೆ ಬಂದಿರುವುದರೊಂದಿಗೆ ವಲಸೆ, ವ್ಯಾಪಾರದ ಬಗ್ಗೆ ವಿದೇಶಾಂಗ ವ್ಯವಹಾರಗಳ ಕುರಿತ ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿ ತರೂರ್ ಕಳವಳ ವ್ಯಕ್ತಪಡಿಸಿದ್ದಾರೆ

ನವದೆಹಲಿ: ಡೊನಾಲ್ಡ್ ಟ್ರಂಪ್ ಮತ್ತೆ ಅಮೆರಿಕದ ಅಧ್ಯಕ್ಷರಾಗಿರುವುದರೊಂದಿಗೆ ಭಾರತ- ಯುಎಸ್ ಸಂಬಂಧ ಮುಂದುವರೆಯುತ್ತದೆ. ಅವರು ಚೀನಾದ ವಿರುದ್ಧ ಕಠಿಣವಾಗಿರುವುದು ನಮಗೆ ಒಳ್ಳೆಯದು ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಹೇಳಿದ್ದಾರೆ.

ಟ್ರಂಪ್ ಅಧಿಕಾರಕ್ಕೆ ಬಂದಿರುವುದರೊಂದಿಗೆ ವಲಸೆ, ವ್ಯಾಪಾರದ ಬಗ್ಗೆ ವಿದೇಶಾಂಗ ವ್ಯವಹಾರಗಳ ಕುರಿತ ಸಂಸತ್ತಿನ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿ ತರೂರ್ ಕಳವಳ ವ್ಯಕ್ತಪಡಿಸಿದ್ದಾರೆ. ಅನೇಕ ವಿಚಾರಗಳಲ್ಲಿ ಟ್ರಂಪ್ ಅವರ ವ್ಯವಹಾರಿಕ ಮನೋಭಾವನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಬುಧವಾರ 47ನೇ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ನಿಜವಾಗಿಯೂ ಅಶ್ಚರ್ಯವೇನಿಲ್ಲ. ಏಕೆಂದರೆ ಬುದ್ದಿವಂತರು ಸ್ವಲ್ಪ ಸಮಯದವರೆಗೆ ತೆರೆದ ಪುಸ್ತಕವಾಗಿರುತ್ತಾರೆ. ಟ್ರಂಪ್ ನಾಲ್ಕು ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು, ಆದ್ದರಿಂದ ಅವರೊಂದಿಗೆ ವ್ಯವಹರಿಸಿದ ಅನುಭವವಿದೆ. ಅವರು ವಿವಿಧ ವಿಷಯಗಳ ಬಗ್ಗೆ ಸಾಕಷ್ಟು ಮುಕ್ತವಾಗಿ ಮಾತನಾಡುತ್ತಾರೆ ಎಂದರು.

ಅನೇಕ ವಿಚಾರಗಳಲ್ಲಿ ಟ್ರಂಪ್ ವ್ಯವಹಾರದ ಮನೋಭಾವವುಳ್ಳವರಾಗಿದ್ದಾರೆ. ಏನನ್ನಾದರೂ ಮಾಡಲು ನಿರ್ಧರಿಸುವ ಮುನ್ನವೇ ನೀವು ನನಗಾಗಿ ಏನು ಮಾಡುತ್ತೀರಿ ಎಂದು ಹೇಳುತ್ತಾರೆ. ಅವರು ವ್ಯಾಪಾರದ ಬಗ್ಗೆ ತುಂಬಾ ಕಠಿಣವಾದ ನಿಲುವು ಹೊಂದಿದ್ದು, ಭಾರತದ ಸುಂಕಗಳನ್ನು ಟೀಕಿಸಿದ್ದಾರೆ. ಭಾರತ ಸುಂಕಗಳನ್ನು ಹೆಚ್ಚಿಸಿದರೆ ನಾವು ಭಾರತಕ್ಕೆ ಸುಂಕವನ್ನು ಹೆಚ್ಚಿಸುತ್ತೇವೆ' ಎಂದು ಹೇಳಿದ್ದರು. ಅದು ನಾವು ಗಮನಿಸಬೇಕಾದ ಸಂಗತಿಯಾಗಿದೆ ಏಕೆಂದರೆ ಇದು ಕಂಪನಿಗಳು ಅಮೆರಿಕಕ್ಕೆ ರಫ್ತು ಮಾಡುವ ಕಾರ್ಯಸಾಧ್ಯತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಶಶಿ ತರೂರ್ ಹೇಳಿದರು.

ವಲಸೆ ವಿಚಾರದಲ್ಲಿ ಟ್ರಂಪ್ ಕಠಿಣ ನಿಲುವು ತಳೆದಿದ್ದಾರೆ. ಇದು ಕಾನೂನು ವಲಸಿಗರ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದು ನನಗೆ ತಿಳಿದಿಲ್ಲ ಎಂದಿದ್ದಾರೆ. ಕಾನೂನುಬದ್ಧ ವಲಸಿಗರ ಸಂಖ್ಯೆಗಳು ಕಡಿಮೆಯಾಗಬಹುದು ಮತ್ತು ನಮ್ಮ ಕೆಲವು ಪ್ರಜೆಗಳಿಗೆ ಕುಟುಂಬ ಪುನರ್ಮಿಲನ ಸಮಸ್ಯೆಗಳು ಉದ್ಭವಿಸಬಹುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ