ವಕ್ಫ್ ಮಸೂದೆ ಕುರಿತ ಜೆಪಿಸಿ ಸದಸ್ಯರೊಂದಿಗೆ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ online desk
ದೇಶ

ವಕ್ಫ್ ಮಸೂದೆ: JPC ಮುಂದಿನ ಸಭೆಗಳಿಗೆ ವಿಪಕ್ಷ ಸದಸ್ಯರ ಬಹಿಷ್ಕಾರ

ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಪಿಸಿ ಸದಸ್ಯರಾಗಿರುವ ಬ್ಯಾನರ್ಜಿ ಮಾತನಾಡಿದ್ದು, ಜೆಪಿಸಿ ಅಧ್ಯಕ್ಷರು ಗುವಾಹಟಿ, ಭುವನೇಶ್ವರ್, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ನೋದಲ್ಲಿ ಆರು ದಿನಗಳ ಕಾಲ ಸಭೆಗಳ ತೀವ್ರ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ ಎಂದು ಸಂಸದ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.

ನವದೆಹಲಿ: ವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಜೆಪಿಸಿ ಅಧ್ಯಕ್ಷರ ದರ್ಪ ಮತ್ತು ಅನಿಯಂತ್ರಿತ ಕ್ರಮವನ್ನು ಆರೋಪಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಜಂಟಿ ಸಂಸದೀಯ ಸಮಿತಿಯ ವಿರೋಧ ಪಕ್ಷದ ಸದಸ್ಯರು ನವೆಂಬರ್ 9 ರಿಂದ ಪ್ರಾರಂಭವಾಗುವ ಮುಂದಿನ ಸುತ್ತಿನ ಸಭೆಗಳನ್ನು ಬಹಿಷ್ಕರಿಸುವುದಾಗಿ ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಪಿಸಿ ಸದಸ್ಯರಾಗಿರುವ ಬ್ಯಾನರ್ಜಿ ಮಾತನಾಡಿದ್ದು, ಜೆಪಿಸಿ ಅಧ್ಯಕ್ಷರು ಗುವಾಹಟಿ, ಭುವನೇಶ್ವರ್, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ನೋದಲ್ಲಿ ಆರು ದಿನಗಳ ಕಾಲ ಸಭೆಗಳ ತೀವ್ರ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ. ಭಾನುವಾರದಂದು ರಜಾದಿನವಾಗಿದೆ. ಅಧ್ಯಕ್ಷರು ಅನಿಯಂತ್ರಿತ ರೀತಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಎಲ್ಲಾ ವಿಪಕ್ಷ ಸದಸ್ಯರು ಜೆಪಿಸಿಯ ಪ್ರವಾಸ ಮತ್ತು ಅದರ ಸಭೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಕೋಲ್ಕತ್ತಾದ ಪ್ರೆಸ್ ಕ್ಲಬ್‌ನಲ್ಲಿ ಪಕ್ಷದ ಸಂಸದ ನದಿಮುಲ್ ಹಕ್ ಅವರೊಂದಿಗೆ ಜಂಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ ಹೇಳಿದ್ದಾರೆ.

ಮುಂದಿನ ಕ್ರಮವನ್ನು ಪ್ರತಿಪಕ್ಷಗಳ ಸದಸ್ಯರು ಒಟ್ಟಾಗಿ ನಿರ್ಧರಿಸುತ್ತಾರೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ನವೆಂಬರ್ 5 ರಂದು ಲೋಕಸಭೆ ಸ್ಪೀಕರ್ ಅವರನ್ನು ಭೇಟಿ ಮಾಡಿ ವೇಳಾಪಟ್ಟಿಯನ್ನು ಮುಂದೂಡುವಂತೆ ಕೋರಿದರು ಮತ್ತು ಜೆಪಿಸಿಯ ಸಭೆಗಳ ಸಂಖ್ಯೆಯನ್ನು ವಾರಕ್ಕೆ ಎರಡು ದಿನಗಳಿಂದ ವಾರಕ್ಕೆ ಒಂದು ದಿನಕ್ಕೆ ಅಥವಾ ಹದಿನೈದು ದಿನಗಳಲ್ಲಿ ಸತತ ಎರಡು ದಿನಗಳಿಗೆ ಕಡಿತಗೊಳಿಸಬೇಕೆಂದು ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಸಭಾಧ್ಯಕ್ಷರು ತಮ್ಮ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಗಣಿಸಿ ಸಭಾಪತಿಯೊಂದಿಗೆ ಮಾತನಾಡುವುದಾಗಿ ಮೌಖಿಕವಾಗಿ ಒಪ್ಪಿಕೊಂಡರು, ಆದರೆ ನಂತರ ಏನೂ ಆಗಲಿಲ್ಲ ಎಂದು ಬ್ಯಾನರ್ಜಿ ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT