ವಕ್ಫ್ ಮಸೂದೆ ಕುರಿತ ಜೆಪಿಸಿ ಸದಸ್ಯರೊಂದಿಗೆ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ online desk
ದೇಶ

ವಕ್ಫ್ ಮಸೂದೆ: JPC ಮುಂದಿನ ಸಭೆಗಳಿಗೆ ವಿಪಕ್ಷ ಸದಸ್ಯರ ಬಹಿಷ್ಕಾರ

ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಪಿಸಿ ಸದಸ್ಯರಾಗಿರುವ ಬ್ಯಾನರ್ಜಿ ಮಾತನಾಡಿದ್ದು, ಜೆಪಿಸಿ ಅಧ್ಯಕ್ಷರು ಗುವಾಹಟಿ, ಭುವನೇಶ್ವರ್, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ನೋದಲ್ಲಿ ಆರು ದಿನಗಳ ಕಾಲ ಸಭೆಗಳ ತೀವ್ರ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ ಎಂದು ಸಂಸದ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ.

ನವದೆಹಲಿ: ವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಜೆಪಿಸಿ ಅಧ್ಯಕ್ಷರ ದರ್ಪ ಮತ್ತು ಅನಿಯಂತ್ರಿತ ಕ್ರಮವನ್ನು ಆರೋಪಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಜಂಟಿ ಸಂಸದೀಯ ಸಮಿತಿಯ ವಿರೋಧ ಪಕ್ಷದ ಸದಸ್ಯರು ನವೆಂಬರ್ 9 ರಿಂದ ಪ್ರಾರಂಭವಾಗುವ ಮುಂದಿನ ಸುತ್ತಿನ ಸಭೆಗಳನ್ನು ಬಹಿಷ್ಕರಿಸುವುದಾಗಿ ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಪಿಸಿ ಸದಸ್ಯರಾಗಿರುವ ಬ್ಯಾನರ್ಜಿ ಮಾತನಾಡಿದ್ದು, ಜೆಪಿಸಿ ಅಧ್ಯಕ್ಷರು ಗುವಾಹಟಿ, ಭುವನೇಶ್ವರ್, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ನೋದಲ್ಲಿ ಆರು ದಿನಗಳ ಕಾಲ ಸಭೆಗಳ ತೀವ್ರ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ. ಭಾನುವಾರದಂದು ರಜಾದಿನವಾಗಿದೆ. ಅಧ್ಯಕ್ಷರು ಅನಿಯಂತ್ರಿತ ರೀತಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಎಲ್ಲಾ ವಿಪಕ್ಷ ಸದಸ್ಯರು ಜೆಪಿಸಿಯ ಪ್ರವಾಸ ಮತ್ತು ಅದರ ಸಭೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಕೋಲ್ಕತ್ತಾದ ಪ್ರೆಸ್ ಕ್ಲಬ್‌ನಲ್ಲಿ ಪಕ್ಷದ ಸಂಸದ ನದಿಮುಲ್ ಹಕ್ ಅವರೊಂದಿಗೆ ಜಂಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ ಹೇಳಿದ್ದಾರೆ.

ಮುಂದಿನ ಕ್ರಮವನ್ನು ಪ್ರತಿಪಕ್ಷಗಳ ಸದಸ್ಯರು ಒಟ್ಟಾಗಿ ನಿರ್ಧರಿಸುತ್ತಾರೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ನವೆಂಬರ್ 5 ರಂದು ಲೋಕಸಭೆ ಸ್ಪೀಕರ್ ಅವರನ್ನು ಭೇಟಿ ಮಾಡಿ ವೇಳಾಪಟ್ಟಿಯನ್ನು ಮುಂದೂಡುವಂತೆ ಕೋರಿದರು ಮತ್ತು ಜೆಪಿಸಿಯ ಸಭೆಗಳ ಸಂಖ್ಯೆಯನ್ನು ವಾರಕ್ಕೆ ಎರಡು ದಿನಗಳಿಂದ ವಾರಕ್ಕೆ ಒಂದು ದಿನಕ್ಕೆ ಅಥವಾ ಹದಿನೈದು ದಿನಗಳಲ್ಲಿ ಸತತ ಎರಡು ದಿನಗಳಿಗೆ ಕಡಿತಗೊಳಿಸಬೇಕೆಂದು ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಸಭಾಧ್ಯಕ್ಷರು ತಮ್ಮ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಗಣಿಸಿ ಸಭಾಪತಿಯೊಂದಿಗೆ ಮಾತನಾಡುವುದಾಗಿ ಮೌಖಿಕವಾಗಿ ಒಪ್ಪಿಕೊಂಡರು, ಆದರೆ ನಂತರ ಏನೂ ಆಗಲಿಲ್ಲ ಎಂದು ಬ್ಯಾನರ್ಜಿ ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT