ಜೆಟ್ ಏರ್ ವೇಸ್  
ದೇಶ

ಜೆಟ್ ಏರ್‌ವೇಸ್ ಮಾಲೀಕತ್ವ ಜೆಕೆಸಿಗೆ ವರ್ಗಾಯಿಸುವ NCLAT ತೀರ್ಪು ತಳ್ಳಿಹಾಕಿದ ಸುಪ್ರೀಂ ಕೋರ್ಟ್: ಹರಾಜಿಗೆ ಆದೇಶ

ಜೆಕೆಸಿ ಪರವಾಗಿ ಜೆಟ್ ಏರ್‌ವೇಸ್‌ನ ನಿರ್ಣಯ ಯೋಜನೆಯನ್ನು ಎತ್ತಿಹಿಡಿಯುವ ಎನ್‌ಸಿಎಲ್‌ಎಟಿ ನಿರ್ಧಾರದ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾಲಗಾರರ ಮನವಿ ಸಲ್ಲಿಕೆಗೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಅವಕಾಶ ನೀಡಿದರು.

ನವದೆಹಲಿ: ಸುಪ್ರೀಂ ಕೋರ್ಟ್ ಗುರುವಾರ ತನ್ನ ವಿಶೇಷ ಸಾಂವಿಧಾನಿಕ ಅಧಿಕಾರವನ್ನು ಬಳಸಿ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್‌ನ ಆಸ್ತಿಯನ್ನು ಹರಾಜು ಹಾಕಲು ಆದೇಶ ನೀಡಿದೆ.

ಜೆಟ್ ಏರ್‌ವೇಸ್‌ನ ನಿರ್ಣಯ ಯೋಜನೆಯನ್ನು ಎತ್ತಿಹಿಡಿಯುವ ರಾಷ್ಟ್ರೀಯ ಕಂಪೆನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (NCLAT) ತೀರ್ಪನ್ನು ಮತ್ತು ವಿಮಾನಯಾನ ಸಂಸ್ಥೆಯ ಮಾಲೀಕತ್ವವನ್ನು ಜಲನ್ ಕಲ್ರಾಕ್ ಕನ್ಸೋರ್ಟಿಯಂ (JKC) ಗೆ ವರ್ಗಾಯಿಸಲು ನೀಡಿದ್ದ ಅನುಮೋದನೆಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ತಳ್ಳಿಹಾಕಿದೆ.

ಜೆಕೆಸಿ ಪರವಾಗಿ ಜೆಟ್ ಏರ್‌ವೇಸ್‌ನ ನಿರ್ಣಯ ಯೋಜನೆಯನ್ನು ಎತ್ತಿಹಿಡಿಯುವ ಎನ್‌ಸಿಎಲ್‌ಎಟಿ ನಿರ್ಧಾರದ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾಲಗಾರರ ಮನವಿ ಸಲ್ಲಿಕೆಗೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಅವಕಾಶ ನೀಡಿದರು.

ಸಾಲಗಾರರು, ಉದ್ಯೋಗಿಗಳು ಮತ್ತು ಇತರ ಮಧ್ಯಸ್ಥಗಾರರ ಹಿತಾಸಕ್ತಿಯನ್ನು ಗಮನಿಸಿ ವಿಮಾನಯಾನ ಸಂಸ್ಥೆಯನ್ನು ಹರಾಜು ಹಾಕಲು ನಿರ್ಧರಿಸಲಾಗಿದೆ. ಎನ್ ಸಿಎಲ್ ಎಟಿ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ಸರ್ವೋಚ್ಚ ನ್ಯಾಯಾಲಯವು ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು ಆದೇಶ ನೀಡಿದೆ. ಯಾವುದೇ ವಿಷಯದಲ್ಲಿ ಸಂಪೂರ್ಣ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಆದೇಶಗಳನ್ನು ಮತ್ತು ತೀರ್ಪುಗಳನ್ನು ಮಾಡುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಹೊಂದಿದೆ.

ಮಾರ್ಚ್ 12 ರಂದು ಎನ್ ಸಿಎಲ್ ಎಟಿ ವಿಮಾನಯಾನ ಸಂಸ್ಥೆಯ ನಿರ್ಣಯ ಯೋಜನೆಯನ್ನು ಎತ್ತಿಹಿಡಿದು ಅದರ ಮಾಲೀಕತ್ವವನ್ನು ಜೆಕೆಸಿಗೆ ವರ್ಗಾಯಿಸಲು ಅನುಮೋದಿಸಿತು.

ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಮತ್ತು ಜೆಸಿ ಫ್ಲವರ್ಸ್ ಅಸೆಟ್ ರೀಕನ್‌ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಎನ್‌ಸಿಎಲ್‌ಎಟಿ ತೀರ್ಪನ್ನು ಪ್ರಶ್ನಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!

Los Angeles ಭೇಟಿಗೂ ಮುನ್ನ ಟ್ರಂಪ್‌ಗೆ ಆಘಾತ; ಗಾಲ್ಫ್‌ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!