ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಹತ್ಯೆಯಾದ ವಿಡಿಜಿಗಳ ಮೃತದೇಹ ಪತ್ತೆ; ಕಿಶ್ತ್ವಾರ್‌ನಲ್ಲಿ ಉಗ್ರರಿಗಾಗಿ ಶೋಧ

ವಿಡಿಜಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಿಶ್ತ್ವಾರ್‌ನಲ್ಲಿ ಬೃಹತ್ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಕಿಶ್ತ್ವಾರ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಬೃಹತ್ ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಂದ ಹತರಾದ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ(ವಿಡಿಜಿ)ಗಳ ಮೃತದೇಹಗಳು ನದಿಯ ಬಳಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಜಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ಕಿಶ್ತ್ವಾರ್‌ನಲ್ಲಿ ಬೃಹತ್ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, ಉಗ್ರರು, ಇಬ್ಬರು ವಿಡಿಜಿಗಳನ್ನು ಕಿಶ್ತ್ವಾರ್ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಅಪಹರಿಸಿದ ನಂತರ ಗುರುವಾರ ಹತ್ಯೆ ಮಾಡಿದ್ದಾರೆ.

ಕೇಶ್ವಾನ್ ಬೆಲ್ಟ್‌ನ ಪಾಂಡ್‌ಗ್ವಾರಿ ಪ್ರದೇಶದ ನದಿಯ ಬಳಿ ವಿಡಿಜಿಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಇತರ ನಾಯಕರು ಉಗ್ರರ ಕೃತ್ಯವನ್ನು ಖಂಡಿಸಿದ್ದು, ಭೀಕರ ಹತ್ಯೆಗಳ ನಂತರ ದಟ್ಟ ಅರಣ್ಯ ಪ್ರದೇಶದಲ್ಲಿ ಪೊಲೀಸರು, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಒಳಗೊಂಡ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ