ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (ಸಂಗ್ರಹ ಚಿತ್ರ) 
ದೇಶ

Bishnoi Gang: 'ಪಶ್ಚಾತ್ತಾಪವೇನಿಲ್ಲ.. ಲಾರೆನ್ಸ್ ಬಿಷ್ಣೋಯ್ ನನ್ನ ಸ್ಫೂರ್ತಿ': Salman Khan ಗೆ ಬೆದರಿಕೆ ಹಾಕಿದ್ದ 'ಹಾವೇರಿ' ವ್ಯಕ್ತಿ ಹೇಳಿಕೆ!

ಲಾರೆನ್ಸ್ ಬಿಷ್ಣೋಯ್ ತನ್ನ ಆರಾಧ್ಯ ದೈವವಾಗಿದ್ದು, ಬಿಷ್ಣೋಯ್ ಸಮುದಾಯಕ್ಕೆ ಮಂದಿರ ನಿರ್ಮಿಸಲು ಸಲ್ಮಾನ್ ಖಾನ್ ಬಳಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಆತ ಹೇಳಿದ್ದಾನೆ.

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೆಂದು ಹೇಳಿಕೊಂಡು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಕರೆ ಮಾಡಿ 5 ಕೋಟಿ ರೂಗೆ ಬೇಡಿಕೆ ಇಟ್ಟಿದ್ದ ಹಾವೇರಿ ವ್ಯಕ್ತಿ ಹೇಳಿಕೆ ಇದೀಗ ವೈರಲ್ ಆಗುತ್ತಿದೆ.

ಇತ್ತೀಚೆಗೆ ಕರ್ನಾಟಕದ ಹಾವೇರಿಯಲ್ಲಿ ಬಂಧನಕ್ಕೀಡಾಗಿದ್ದ ಭಿಕಾ ರಾಮ್ ಬಿಷ್ಣೋಯ್, 'ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿ ಜೈಲುಪಾಲಾಗಿರುವುದಕ್ಕೆ ನನಗಾವುದೇ ಪಶ್ಚಾತ್ತಾಪವಿಲ್ಲ.. ಬಿಷ್ಣೋಯ್ ಸಮುದಾಯಕ್ಕಾಗಿ ಜೈಲಿಗೆ ಹೋಗಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾರೆ.

ಮುಂಬೈ ಪೊಲೀಸರ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೆಂದು ಹೇಳಿಕೊಂಡು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ನೀಡಿ 5 ಕೋಟಿ ರುಪಾಯಿ ಬೇಡಿಕೆಯಿಟ್ಟ ಆರೋಪದ ಮೇಲೆ ಭಿಕಾ ರಾಮ್ ಬಿಷ್ಣೋಯ್ ನನ್ನು ಬಂಧಿಸಲಾಗಿದೆ. ಪ್ರಸ್ತುತ ವರ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಂತೆಯೇ ವಿಚಾರಣೆ ವೇಳೆ, 'ಬೆದರಿಕೆ ಹಾಕಿ ಪೊಲೀಸರಿಂದ ಬಂಧನಕ್ಕೀಡಾಗಿದ್ದಕ್ಕೆ ತನಗೆ ಯಾವುದೇ ವಿಷಾದವಿಲ್ಲ. ಬಿಷ್ಣೋಯ್ ಸಮುದಾಯಕ್ಕಾಗಿ ಜೈಲಿಗೆ ಹೋಗಿದ್ದಕ್ಕೆ ನನಗೆ ಖುಷಿ ಇದೆ. ಲಾರೆನ್ಸ್ ಬಿಷ್ಣೋಯ್ ತನ್ನ ಆರಾಧ್ಯ ದೈವವಾಗಿದ್ದು, ಬಿಷ್ಣೋಯ್ ಸಮುದಾಯಕ್ಕೆ ಮಂದಿರ ನಿರ್ಮಿಸಲು ಸಲ್ಮಾನ್ ಖಾನ್ ಬಳಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಆತ ಬಹಿರಂಗಪಡಿಸಿದ್ದಾನೆ ಎಂದು ಹೇಳಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ವಿಡಿಯೋ ವೀಕ್ಷಿಸುತ್ತಿದ್ದ ಆರೋಪಿ

ಇನ್ನು ಆರೋಪಿ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ನ ಅಭಿಮಾನಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್ ವೀಡಿಯೊಗಳನ್ನು ನಿಯಮಿತವಾಗಿ ವೀಕ್ಷಿಸುತ್ತಿದ್ದ. ಜೈಲಿನೊಳಗಿಂದಲೇ ಬಿಷ್ಣೋಯ್ ಸಮುದಾಯಕ್ಕಾಗಿ ಸಾಕಷ್ಟು ಮಾಡುತ್ತಿದ್ದಾರೆ ಎಂದು ಹೆಮ್ಮೆಪಡುತ್ತಿದ್ದ. ಅಂತೆಯೇ ಹಿಟ್ ಅಂಡ್ ರನ್ ಪ್ರಕರಣವಾಗಲಿ ಅಥವಾ ಕೃಷ್ಣಮೃಗ ಬೇಟೆ ಪ್ರಕರಣವಾಗಲಿ ಸಲ್ಮಾನ್ ಖಾನ್ ತಾನು ಮಾಡಿದ ಯಾವುದೇ ಕೃತ್ಯಕ್ಕೆ ಕ್ಷಮೆ ಕೇಳಿಲ್ಲ. ಹೀಗಾಗಿ ಆತನ ವಿರುದ್ಧ ಲಾರೆನ್ಸ್ ಬಿಷ್ಣೋಯ್ ಮಾಡುತ್ತಿರುವುದು ಸರಿಯಾಗಿದೆ ಎಂದು ನಂಬಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ 32 ವರ್ಷದ ಭಿಕಾ ರಾಮ್ ಬಿಷ್ಣೋಯ್ ನನ್ನು ಕರ್ನಾಟಕದ ಹಾವೇರಿಯಲ್ಲಿ ಬಂಧಿಸಿ ಬುಧವಾರ ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!