ಖರ್ಗೆ 
ದೇಶ

ಬಿಜೆಪಿ ನಾಯಕರಿಂದ ಪ್ರಚೋದನಾಕಾರಿ, ಸುಳ್ಳಿನ ಭಾಷಣ; ಜನರ ಗಮನ ಬೇರೆಡೆ ಸೆಳೆಯುವ ಯತ್ನ: ಖರ್ಗೆ

ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ರಾಜ್ಯಕ್ಕೆ ಮತ್ತೆ ಅಭಿವೃದ್ಧಿ ಪಥಕ್ಕೆ ತರುವ, ಉತ್ತಮ ಆಡಳಿತದ ಸರ್ಕಾರದ ಅಗತ್ಯವಿದ್ದು, ಮಹಾ ವಿಕಾಸ್ ಆಘಾಡಿ ಸರ್ಕಾರ ಚುನಾವಣೆಯಲ್ಲಿ ಗೆಲ್ಲಲಿದೆ.

ನಾಗ್ಪುರ: ಪ್ರಚೋದನಾಕಾರಿ ಭಾಷಣ ಮತ್ತು ಸುಳ್ಳಿನ ಸರಮಾಲೆಯಿಂದ ಬಿಜೆಪಿ ನಾಯಕರು ಜನರ ಗಮನವನ್ನ ಬೇರೆಡೆ ಸೆಳೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ರಾಜ್ಯಕ್ಕೆ ಮತ್ತೆ ಅಭಿವೃದ್ಧಿ ಪಥಕ್ಕೆ ತರುವ, ಉತ್ತಮ ಆಡಳಿತದ ಸರ್ಕಾರದ ಅಗತ್ಯವಿದ್ದು, ಮಹಾ ವಿಕಾಸ್ ಆಘಾಡಿ ಸರ್ಕಾರ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಯೋಗಿ ಆದಿತ್ಯನಾಥ್ ಅವರ ವಿಭಜನೆಯಾದ್ರೆ, ಮುಗಿಸ್ತಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ನಾವು ಒಗ್ಗಟ್ಟಾಗಿದ್ದರೆ ಸುರಕ್ಷತೆ ಎಂಬ ಘೋಷಣೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ಯೋಗಿ ಘೋಷಣೆ ಅನುಸರಿಸಬೇಕೋ ಅಥವಾ ಮೋದಿ ಘೋಷಣೆ ಅನುಸರಿಸಬೇಕೋ ಎಂಬುದನ್ನು ಮೊದಲು ನಿಮ್ಮೊಳಗೆ ನಿರ್ಧರಿಸಿ. ಬಿಜೆಪಿ ಪ್ರಚೋದನಾಕಾರಿ ಹಾಗೂ ಸುಳ್ಳಿನ ಭಾಷಣಗಳ ಮೂಲಕ ಅನೇಕ ವಿಚಾರಗಳಿಂದ ಜನರ ಗಮನ ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದರು.

ಕಳೆದ 11 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಯಾವ ಕೆಲಸ ಮಾಡಿದೆ ಎಂಬುದನ್ನು ಕಾಂಗ್ರೆಸ್ ಜೊತೆಗೆ ಚರ್ಚೆಯಲ್ಲಿ ತಿಳಿಸಲಿ. 55 ವರ್ಷಗಳಲ್ಲಿ ಮಾಡಿರುವ ಕೆಲಸಗಳ ಬಗ್ಗೆ ನಾವು ಹೇಳುತ್ತಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT