ಅಮಿತ್ ಶಾ - ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ತೋರಿಸಿದ ಸಂವಿಧಾನದ ಪ್ರತಿ ನಕಲಿ: ಅಮಿತ್ ಶಾ

ಬಿಜೆಪಿ Rally ಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್‌ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಪಲಮು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಸಂವಿಧಾನವನ್ನು ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆರೋಪಿಸಿದ್ದಾರೆ.

ಇಂದು ಜಾರ್ಖಂಡ್ ನ ಪಲಮುನಲ್ಲಿ ಬಿಜೆಪಿ Rally ಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್‌ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿಯವರು ಸಂವಿಧಾನದ ಪ್ರತಿಯನ್ನು ತೋರಿಸುತ್ತಾರೆ. ಅವರು ತೋರಿಸಿದ ಸಂವಿಧಾನದ ಪ್ರತಿ ನಕಲಿ ಎಂಬುದು ಎರಡು ದಿನಗಳ ಹಿಂದೆ ಬಹಿರಂಗವಾಗಿದೆ. ಯಾವುದೇ ವಿಷಯವಿಲ್ಲದ ಆ ಪ್ರತಿಯ ಮುಖಪುಟದಲ್ಲಿ ಭಾರತದ ಸಂವಿಧಾನ ಎಂದು ಬರೆಯಲಾಗಿದೆ.... ಸಂವಿಧಾನವನ್ನು ಅಪಹಾಸ್ಯ ಮಾಡಬೇಡಿ, ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ನೀವು ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದೀರಿ ಮತ್ತು ಸಂವಿಧಾನವನ್ನು ಅಪಹಾಸ್ಯ ಮಾಡಿದ್ದೀರಿ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದರು.

ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದರು.

ಒಬಿಸಿ, ಬುಡಕಟ್ಟು ಮತ್ತು ದಲಿತರಿಂದ ಮೀಸಲಾತಿಯನ್ನು ಕಿತ್ತುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ ಮತ್ತು ಆ ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲು ಯೋಜಿಸಿದೆ ಎಂದು ಶಾ ಆರೋಪಿಸಿದರು.

"ಕಾಂಗ್ರೆಸ್ ಒಬಿಸಿ ಕೋಟಾದ ವಿರುದ್ಧವಾಗಿದೆ. ಉಲೇಮಾಗಳ ನಿಯೋಗವು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾದಾಗ ಅಲ್ಪಸಂಖ್ಯಾತರಿಗೆ ಶೇ. 10 ರಷ್ಟು ಮೀಸಲಾತಿ ನೀಡುವ ಭರವಸೆ ನೀಡಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ, ಬಿಜೆಪಿ ಯಾವತ್ತೂ ಧರ್ಮ ಆಧಾರಿತ ಮೀಸಲಾತಿ ಅವಕಾಶ ನೀಡುವುದಿಲ್ಲ" ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT