ಸಾಂದರ್ಭಿಕ ಚಿತ್ರ  
ದೇಶ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ ಶಾಕ್: ಆಪ್ತ ಕಾರ್ಯದರ್ಶಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿ

ರಾಂಚಿಯಲ್ಲಿ ಏಳು ಮತ್ತು ಜಮ್ಶೆಡ್‌ಪುರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಸುನಿಲ್ ಶ್ರೀವಾಸ್ತವ ಅವರ ನಿವಾಸವು ರಾಂಚಿಯ ಅಶೋಕ್ ನಗರ ರಸ್ತೆ ಸಂಖ್ಯೆ 4 ರ ಮುಂಭಾಗದಲ್ಲಿದೆ.

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ ದೊಡ್ಡ ಹೊಡೆತ ನೀಡುವ ಘಟನೆ ನಡೆದಿದ್ದು, ಆದಾಯ ತೆರಿಗೆ ಇಲಾಖೆ ಶನಿವಾರ ರಾಂಚಿ ಮತ್ತು ಜೆಮ್‌ಶೆಡ್‌ಪುರದಲ್ಲಿ ಅವರ ಆಪ್ತ ಕಾರ್ಯದರ್ಶಿ ಸುನಿಲ್ ಶ್ರೀವಾಸ್ತವ್‌ಗೆ ಸಂಬಂಧಿಸಿದ ಕನಿಷ್ಠ 17 ಸ್ಥಳಗಳ ಮೇಲೆ ದಾಳಿ ಮಾಡಿದೆ.

ಆರಂಭಿಕ ವರದಿಗಳ ಪ್ರಕಾರ, ರಾಂಚಿಯಲ್ಲಿ ಏಳು ಮತ್ತು ಜಮ್ಶೆಡ್‌ಪುರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಸುನಿಲ್ ಶ್ರೀವಾಸ್ತವ ಅವರ ನಿವಾಸವು ರಾಂಚಿಯ ಅಶೋಕ್ ನಗರ ರಸ್ತೆ ಸಂಖ್ಯೆ 4 ರ ಮುಂಭಾಗದಲ್ಲಿದೆ. ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಹವಾಲಾ ಮೂಲಕ ಹಣದ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಅಕ್ಟೋಬರ್ 26 ರಂದು ರಾಂಚಿ, ಜಮ್‌ಶೆಡ್‌ಪುರ, ಗಿರಿದಿಹ್ ಮತ್ತು ಕೋಲ್ಕತ್ತಾದ 35 ಸ್ಥಳಗಳಲ್ಲಿ ಐಟಿ ದಾಳಿ ನಡೆಸಿತ್ತು, ಈ ಸಂದರ್ಭದಲ್ಲಿ ಸುಮಾರು 150 ಕೋಟಿ ಮೌಲ್ಯದ ಬೇನಾಮಿ ಆಸ್ತಿ ಮತ್ತು ಹೂಡಿಕೆ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ದಾಳಿ ವೇಳೆ ಪತ್ತೆಯಾದ ಮೊತ್ತವನ್ನು ವರ್ತಕರ ಖಾತೆ ಪುಸ್ತಕಗಳೊಂದಿಗೆ ತಾಳೆ ಹಾಕಿ 70 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡು ಬ್ಯಾಂಕ್ ಗೆ ಜಮಾ ಮಾಡಲಾಗಿದೆ. ಆದರೆ, ಯಾವುದೇ ಅಧಿಕೃತ ದೃಢೀಕರಣವಿಲ್ಲ, ಇಂದಿನ ದಾಳಿಗಳು ಸಹ ಅದಕ್ಕೆ ಸಂಬಂಧಿಸಿವೆ ಎಂದು ಹೇಳಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT