ಸಾಂದರ್ಭಿಕ ಚಿತ್ರ  
ದೇಶ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ ಶಾಕ್: ಆಪ್ತ ಕಾರ್ಯದರ್ಶಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿ

ರಾಂಚಿಯಲ್ಲಿ ಏಳು ಮತ್ತು ಜಮ್ಶೆಡ್‌ಪುರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಸುನಿಲ್ ಶ್ರೀವಾಸ್ತವ ಅವರ ನಿವಾಸವು ರಾಂಚಿಯ ಅಶೋಕ್ ನಗರ ರಸ್ತೆ ಸಂಖ್ಯೆ 4 ರ ಮುಂಭಾಗದಲ್ಲಿದೆ.

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ ದೊಡ್ಡ ಹೊಡೆತ ನೀಡುವ ಘಟನೆ ನಡೆದಿದ್ದು, ಆದಾಯ ತೆರಿಗೆ ಇಲಾಖೆ ಶನಿವಾರ ರಾಂಚಿ ಮತ್ತು ಜೆಮ್‌ಶೆಡ್‌ಪುರದಲ್ಲಿ ಅವರ ಆಪ್ತ ಕಾರ್ಯದರ್ಶಿ ಸುನಿಲ್ ಶ್ರೀವಾಸ್ತವ್‌ಗೆ ಸಂಬಂಧಿಸಿದ ಕನಿಷ್ಠ 17 ಸ್ಥಳಗಳ ಮೇಲೆ ದಾಳಿ ಮಾಡಿದೆ.

ಆರಂಭಿಕ ವರದಿಗಳ ಪ್ರಕಾರ, ರಾಂಚಿಯಲ್ಲಿ ಏಳು ಮತ್ತು ಜಮ್ಶೆಡ್‌ಪುರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಸುನಿಲ್ ಶ್ರೀವಾಸ್ತವ ಅವರ ನಿವಾಸವು ರಾಂಚಿಯ ಅಶೋಕ್ ನಗರ ರಸ್ತೆ ಸಂಖ್ಯೆ 4 ರ ಮುಂಭಾಗದಲ್ಲಿದೆ. ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಹವಾಲಾ ಮೂಲಕ ಹಣದ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಅಕ್ಟೋಬರ್ 26 ರಂದು ರಾಂಚಿ, ಜಮ್‌ಶೆಡ್‌ಪುರ, ಗಿರಿದಿಹ್ ಮತ್ತು ಕೋಲ್ಕತ್ತಾದ 35 ಸ್ಥಳಗಳಲ್ಲಿ ಐಟಿ ದಾಳಿ ನಡೆಸಿತ್ತು, ಈ ಸಂದರ್ಭದಲ್ಲಿ ಸುಮಾರು 150 ಕೋಟಿ ಮೌಲ್ಯದ ಬೇನಾಮಿ ಆಸ್ತಿ ಮತ್ತು ಹೂಡಿಕೆ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ದಾಳಿ ವೇಳೆ ಪತ್ತೆಯಾದ ಮೊತ್ತವನ್ನು ವರ್ತಕರ ಖಾತೆ ಪುಸ್ತಕಗಳೊಂದಿಗೆ ತಾಳೆ ಹಾಕಿ 70 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡು ಬ್ಯಾಂಕ್ ಗೆ ಜಮಾ ಮಾಡಲಾಗಿದೆ. ಆದರೆ, ಯಾವುದೇ ಅಧಿಕೃತ ದೃಢೀಕರಣವಿಲ್ಲ, ಇಂದಿನ ದಾಳಿಗಳು ಸಹ ಅದಕ್ಕೆ ಸಂಬಂಧಿಸಿವೆ ಎಂದು ಹೇಳಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!