ಕಾಲುವೆ ನೀರಿನಲ್ಲೇ ಶವ ಸಾಗಾಟ 
ದೇಶ

ಕುತ್ತಿಗೆ ವರೆಗಿನ ನೀರಿನಲ್ಲೇ ಗ್ರಾಮಸ್ಥರಿಂದ ಶವ ಸಾಗಾಟ: ಸೇತುವೆ ನಿರ್ಮಾಣಕ್ಕೆ 20 ಲಕ್ಷ ರೂ ಕೊಟ್ಟ ಜಿಲ್ಲಾಧಿಕಾರಿ!

ಉತ್ತರ ರಾಜನ್‌ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದರೆ, ಈಜು ಬಲ್ಲವರು ಮಾತ್ರ ಮೃತದೇಹಗಳನ್ನು ಕೊಳ್ಳಿಡಾಂ ನದಿ ಪಾತ್ರದ ಸಮಾಧಿ ಸ್ಥಳಕ್ಕೆ ಕೊಂಡೊಯ್ಯಬಹುದು.

ಕಡಲೂರು: 92 ವರ್ಷದ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕಾಗಿ ತಮಿಳುನಾಡು ಗ್ರಾಮಸ್ಥರು ಕುತ್ತಿಗೆ ವರೆಗೆ ನೀರು ಹರಿಯುತ್ತಿರುವ ಕಾಲುವೆ ದಾಟುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಧಿಕಾರಿ ಕಾಲುವೆ ಮೇಲೆ ಸೇತುವೆ ನಿರ್ಮಾಣಕ್ಕೆ ಹಣಕಾಸಿನ ನೆರವಿಗೆ ಮುಂದಾಗಿದ್ದಾರೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್‌ನಾರ್‌ಕೋಯಿಲ್‌ ಬಳಿಯ ವೀರಸೋಜಪುರಂ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿ ಗ್ರಾಮದಿಂದ ಆಚೆ ಇರುವ ಕಾಲುವೆ ಬಳಿಕ ಸ್ಮಶಾನವಿದೆ.

ಹೀಗಾಗಿ ಗ್ರಾಮದಲ್ಲಿ ಯಾರೇ ಮರಣಹೊಂದಿದರೂ ಅವರ ದೇಹವನ್ನು ಈ ಕಾಲುವೆ ದಾಟಿಯೇ ಸ್ಮಶಾನಕ್ಕೆ ಸಾಗಿಸಬೇಕಾದ ಪರಿಸ್ಥಿತಿ ಇದೆ. ಇದೇ ರೀತಿ 92 ವರ್ಷದ ವೃದ್ಧರ ಮೃತದೇಹವನ್ನು ತುಂಬಿ ಹರಿಯುತ್ತಿರುವ ಕಾಲುವೆಯಲ್ಲಿಯೇ ಗ್ರಾಮಸ್ಥರು ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.

ಈ ಗ್ರಾಮದಲ್ಲಿ 100ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. 'ಉತ್ತರ ರಾಜನ್‌ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದರೆ, ಈಜು ಬಲ್ಲವರು ಮಾತ್ರ ಮೃತದೇಹಗಳನ್ನು ಕೊಳ್ಳಿಡಾಂ ನದಿ ಪಾತ್ರದ ಸಮಾಧಿ ಸ್ಥಳಕ್ಕೆ ಕೊಂಡೊಯ್ಯಬಹುದು, ಇಲ್ಲಿ ಸೇತುವೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕಡಲೂರು ಜಿಲ್ಲಾಧಿಕಾರಿ ಸಿಬಿ ಆದಿತ್ಯ ಸೆಂಥಿಲ್ ಕುಮಾರ್ ಅವರು ರಾಜನ್ ಕಾಲುವೆಗೆ ಪಾದಚಾರಿ ಸೇತುವೆ ನಿರ್ಮಿಸಲು 20 ಲಕ್ಷ ರೂ ಆರ್ಥಿಕ ನೆರವು ನೀಡಿದ್ದು, ಪ್ರಸ್ತುತ ಮುಂಗಾರು ಮಳೆಯಿಂದಾಗಿ ತಕ್ಷಣದ ಪರಿಹಾರವಾಗಿ ಈ ಪ್ರದೇಶದಲ್ಲಿ ತಾತ್ಕಾಲಿಕ ಸೇತುವೆಯನ್ನು ಶೀಘ್ರದಲ್ಲಿ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!