ಪ್ರಶಾಂತ್ ಕಿಶೋರ್, ನಿತೀಶ್ ಕುಮಾರ್ 
ದೇಶ

ನಾಚಿಕೆಯಿಲ್ಲದ ನಿತೀಶ್ ಕುಮಾರ್, ಮುಸ್ಲಿಂರ ಬೆನ್ನಿಗೆ ಚೂರಿ: ಪ್ರಶಾಂತ್ ಕಿಶೋರ್ ವಾಗ್ದಾಳಿ

ಪ್ರಶಾಂತ್ ಕಿಶೋರ್ ಒಂದು ಕಾಲದಲ್ಲಿ ನಿತೀಶ್ ಕುಮಾರ್ ಗೆ ಆಪ್ತರಾಗಿದ್ದರು. ಸಿಎಎ ವಿಚಾರದಲ್ಲಿ ನಿತೀಶ್ ಜೊತೆಗೆ ಭಿನ್ನಾಭಿಪ್ರಾಯದ ನಂತರ ಜೆಡಿಯು ಉಪಾಧ್ಯಕ್ಷ ಸ್ಥಾನದಿಂದ ಅವರನ್ನು ಹೊರಹಾಕಲಾಗಿತ್ತು.

ರಾಮಗಢ: ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಭಾನುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದು, ಅವರನ್ನು 'ನಾಚಿಕೆಯಿಲ್ಲದವರು' ಎಂದು ಕರೆದಿದ್ದಾರೆ ಮತ್ತು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಮುಸ್ಲಿಮರಿಗೆ "ಬೆನ್ನು ಚೂರಿ ಹಾಕುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.

ನಾಲ್ಕು ವಿಧಾನಸಭಾ ಸ್ಥಾನಗಳ ಉಪ ಚುನಾವಣೆ ಪ್ರಚಾರದ ವೇಳೆ ಅಲ್ಪಸಂಖ್ಯಾತ ಸಮುದಾಯ ತಲುಪಲು ನಿತೀಶ್ ಪ್ರಯತ್ನ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಶಾಂತ್ ಕಿಶೋರ್, ಹೌದು, ನಿಜಕ್ಕೂ ನಿತೀಶ್ ಕುಮಾರ್ ಮುಸ್ಲಿಮರ ಬೆನ್ನಿಗೆ ಚೂರಿ ಹಾಕುವ ಸಾಕಷ್ಟು ಕೆಲಸ ಮಾಡಿದ್ದಾರೆ. ಮುಸ್ಲಿಂರ ಬೆಂಬಲದೊಂದಿಗೆ 2015ರಲ್ಲಿ ಸರ್ಕಾರ ರಚಿಸಿದ್ದ ನಿತೀಶ್, ಎರಡು ವರ್ಷಗಳ ನಂತರ ಮತ್ತೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ನಾಚಿಕೆಗೇಡಿನ ವಿಚಾರ ಎಂದರು.

ಪ್ರಶಾಂತ್ ಕಿಶೋರ್ ಒಂದು ಕಾಲದಲ್ಲಿ ನಿತೀಶ್ ಗೆ ಆಪ್ತರಾಗಿದ್ದರು. ಸಿಎಎ ವಿಚಾರದಲ್ಲಿ ನಿತೀಶ್ ಜೊತೆಗೆ ಭಿನ್ನಾಭಿಪ್ರಾಯದ ನಂತರ ಜೆಡಿಯು ಪಕ್ಷದಿಂದ ಹೊರಹಾಕಲಾಗಿತ್ತು. ಬಿಹಾರ ಸಿಎಂ "ಮುಸ್ಲಿಮರನ್ನು ಅನರ್ಹಗೊಳಿಸುವ ಬೆದರಿಕೆಯ ಕಾನೂನನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಿತೀಶ್ ಕುಮಾರ್ ಅವರು ಒಂದೆರಡು ವರ್ಷಗಳ ಹಿಂದೆ ಮಹಾಘಟಬಂಧನ್‌ಗೆ ಹಿಂತಿರುಗಿದಾಗ ಮುಸ್ಲಿಮರು ಮತ್ತೆ ಅವರನ್ನು ಬೆಂಬಲಿಸಿದ್ದರು. ಈಗ ಅವರ ಪಕ್ಷವು ಕೇಂದ್ರದ ಸರ್ಕಾರದಲ್ಲಿ ಪಾಲುದಾರರಾಗಿದ್ದು, ಅವರ ನಾಯಕರು ಕೇಂದ್ರದಲ್ಲಿ ಸಚಿವರಾಗಿದ್ದು, ವಿವಾದಾತ್ಮಕ ವಕ್ಫ್ ಮಸೂದೆಯನ್ನು ತರಲಾಗಿದೆ. ನಿತೀಶ್ ಕುಮಾರ್ ನಾಚಿಕೆಯಿಲ್ಲದ ವ್ಯಕ್ತಿ. ಅವರನ್ನು ಅಧಿಕಾರದಿಂದ ಹೊರಹಾಕಲು ಬಿಹಾರದ ಜನ ಬಯಸುತ್ತಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT