ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ವಿಮಾನ ನಿಲ್ದಾಣದಲ್ಲಿ 19 ಕೆಜಿ ಚಿನ್ನ ವಶ; ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರ ಬಂಧನ

ಸ್ಕೂಟ್ ಏರ್‌ಲೈನ್ಸ್ (TR 578) ಏರ್ ಇಂಡಿಯಾ (IX 687) ಮತ್ತು ಇಂಡಿಗೋ (6E-1004) ವಿಮಾನಗಳಲ್ಲಿ ಬಂದಿಳಿದ ಎಲ್ಲಾ ಪ್ರಯಾಣಿಕರು ಒಂದೇ ಗ್ಯಾಂಗ್‌ಗೆ ಸೇರಿದವರು ಎನ್ನಲಾಗಿದ್ದು, ಎಲ್ಲಾ 25 ಪ್ರಯಾಣಿಕರನ್ನು ಬಂಧಿಸಲಾಗಿದೆ.

ಚೆನ್ನೈ: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಸಿಂಗಾಪುರದಿಂದ ಬಂದಿಳಿದ 25 ಪ್ರಯಾಣಿಕರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಚೆನ್ನೈ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ರೂ. 15 ಕೋಟಿ ಮೌಲ್ಯದ 19.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಗುಪ್ತಚರ ಮಾಹಿತಿ ಆಧಾರಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ಸ್ಕೂಟ್ ಏರ್‌ಲೈನ್ಸ್ (TR 578) ಏರ್ ಇಂಡಿಯಾ (IX 687) ಮತ್ತು ಇಂಡಿಗೋ (6E-1004) ವಿಮಾನಗಳಲ್ಲಿ ಬಂದಿಳಿದ ಎಲ್ಲಾ ಪ್ರಯಾಣಿಕರು ಒಂದೇ ಗ್ಯಾಂಗ್‌ಗೆ ಸೇರಿದವರು ಎನ್ನಲಾಗಿದ್ದು, ಎಲ್ಲಾ 25 ಪ್ರಯಾಣಿಕರನ್ನು ಬಂಧಿಸಲಾಗಿದೆ.

ವಶಕ್ಕೆ ಪಡೆದ ಚಿನ್ನವು ಕಚ್ಚಾ 24 ಕ್ಯಾರೆಟ್ ಚಿನ್ನದ ಸರಗಳ ರೂಪದಲ್ಲಿದೆ (ಒಟ್ಟು 42) ಇವುಗಳನ್ನು ಒಳ ಉಡುಪುಗಳಲ್ಲಿ ಮರೆಮಾಡಲಾಗಿರುವ ಪ್ಲಾಸ್ಟಿಕ್ ಪ್ಯಾಕೇಜ್‌ಗಳಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಯಾಣಿಕರು ಸಾಗಿಸುತ್ತಿದ್ದ ಚಿನ್ನದ ಪ್ರಮಾಣ 600 ಗ್ರಾಂನಿಂದ 1.2 ಕೆಜಿ ವರೆಗೆ ಇತ್ತು. ಅವರಲ್ಲಿ ಹೆಚ್ಚಿನವರು ಸುಮಾರು 800 ಗ್ರಾಂ ತೂಕದ ಸರ ಹೊಂದಿದ್ದರು. ಸಾಮಾನ್ಯವಾಗಿ ಲೋಹದ ಡಿಟೆಕ್ಟರ್‌ಗಳಿಂದ ಚಿನ್ನವನ್ನು ಪತ್ತೆ ಮಾಡಲಾಗುತ್ತದೆ. ಆದರೆ, ಅದು ಆಗಿಲ್ಲ ಎಂದು ಡಿಆರ್ ಐ ಮೂಲಗಳು ತಿಳಿಸಿವೆ.

ವಿಚಾರಣೆ ವೇಳೆ, ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಪಾರ್ಸೆಲ್ ನೀಡಲಾಗಿದೆ ಮತ್ತು ಅದನ್ನು ಚೆನ್ನೈಗೆ ಸಾಗಿಸಲು ಹಣ ಪಾವತಿಸಲಾಗಿದೆ ಎಂದು ಅವರೆಲ್ಲರೂ ಒಂದೇ ರೀತಿಯ ಉತ್ತರ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT