ದರ್ಬಾರ್ ಸಾಹಿಬ್ ಗುರುದ್ವಾರ 
ದೇಶ

'ಆಪರೇಷನ್ ಬ್ಲೂ ಸ್ಟಾರ್' ತೋರಿಸಿ ಸಿಖ್ ಯಾತ್ರಾರ್ಥಿಗಳಲ್ಲಿ ದ್ವೇಷ ಬಿತ್ತಲು ಪಾಕ್ ಯತ್ನ: ತಿರುಗೇಟಿಗೆ ಭಾರತ ಮುಂದು..!

ಪಾಕಿಸ್ತಾನದ ಈ ದುರ್ವರ್ತನೆಗೆ ಬಿಎಸ್ಎಫ್ ಈ ಹಿಂದೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ವಿಡಿಯೋ ಪ್ರದರ್ಶನವನ್ನು ಪಾಕಿಸ್ತಾನ ನಿಲ್ಲಿಸಿತ್ತು.

ಚಂಡೀಗಢ: ಕರ್ತಾರ್‌ಪುರ ಕಾರಿಡಾರ್ ಮೂಲಕ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಾರ್ಥಿಗಳಿಗೆ ಆಪರೇಷನ್ ಬ್ಲೂ ಸ್ಟಾರ್ ವಿಡಿಯೋಗಳನ್ನು ತೋರಿಸಿ ದ್ವೇಷ ಹರುಡುತ್ತಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಭಾರತ ಮುಂದಾಗಿದೆ.

ಸಿಖ್ ಯಾತ್ರಾರ್ಥಿಗಳಲ್ಲಿ ದೇಶ ಭಕ್ತಿ ಹೆಚ್ಚಿಸಲು ಹಾಗೂ ನಮ್ಮ ಸೇನೆಯ ಧೈರ್ಯ, ಸ್ಥೈರ್ಯ ಪ್ರದರ್ಶಿಸಲು ಗಡಿ ಭದ್ರತಾ ಪಡೆ (ಬಿಎಸ್ಎಫ್) ದೇಶಭಕ್ತಿ ಸಿನಿಮಾಗಳನ್ನು ಪ್ರದರ್ಶಿಸಲು ಕಾರ್ಯವಿಧಾನಗಳನ್ನು ರೂಪಿಸಿದೆ ಎಂದು ತಿಳಿದುಬಂದಿದೆ.

ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಾರ್ಥಿಗಳಲ್ಲಿ ಭಾರತ ವಿರೋಧಿ ಭಾವನೆಯನ್ನು ಹುಟ್ಟುಹಾಕಲು ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಪಾಕಿಸ್ತಾನ ಆಪರೇಷನ್ ಬ್ಲೂ ಸ್ಟಾರ್ ವಿಡಿಯೋಗಳನ್ನು ತೋರಿಸುತ್ತಿದ್ದು, ಭಾರತಕ್ಕೆ ಮರಳಿದ ಬಳಿಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುವ ಕೆಲಸ ಮಾಡುತ್ತಿದೆ. ಅಲ್ಲದೆ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆಯನ್ನೂ ನೀಡುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಪಾಕಿಸ್ತಾನದ ಈ ದುರ್ವರ್ತನೆಗೆ ಬಿಎಸ್ಎಫ್ ಈ ಹಿಂದೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ವಿಡಿಯೋ ಪ್ರದರ್ಶನವನ್ನು ಪಾಕಿಸ್ತಾನ ನಿಲ್ಲಿಸಿತ್ತು. ಆದರೀಗ ಮತ್ತೆ ತನ್ನ ದುರ್ಬುದ್ಧಿಯನ್ನು ಪ್ರದರ್ಶಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಿರುಗೇಟು ನೀಡುವ ಸಲುವಾಗಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಖ್ ಯಾತ್ರಾರ್ಥಿಗಳಲ್ಲಿ ದೇಶದ ಭಕ್ತಿಯನ್ನು ಹೆಚ್ಚಿಸಲು ಹಲವು ಕ್ರಮಗಳ ರೂಪಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT