ಕೆಎಸ್ ಆರ್ ಟಿಸಿ ಮತ್ತು ಶಬರಿಮಲೆ 
ದೇಶ

KSRTC Volvo bus: ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ಸೇವೆ, ಇಲ್ಲಿದೆ ಮಾಹಿತಿ!

ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೊಸ ವೋಲ್ವೋ ಬಸ್ ಸೇವೆ ಆರಂಭಿಸಿದೆ.

ಬೆಂಗಳೂರು: ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರಿಗೆ KSRTC ಸಿಹಿಸುದ್ದಿ ನೀಡಿದ್ದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ Volvo bus ಸೇವೆ ಆರಂಭಿಸುತ್ತಿದೆ.

ಹೌದು.. ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದೆ. ಪ್ರಕಟಣೆಯಲ್ಲಿರುವಂತೆ ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ. ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT