ಶಾರೂಕ್ ಖಾನ್  
ದೇಶ

ಶಾರೂಕ್ ಖಾನ್ ಗೆ ಕೊಲೆ ಬೆದರಿಕೆ: ರಾಯ್ ಪುರದ ವಕೀಲರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು

ಖ್ಯಾತ ಬಾಲಿವುಡ್ ತಾರೆ ಶಾರೂಕ್ ಖಾನ್ ನಿಂದ ಸುಲಿಗೆಗೆ ಬೇಡಿಕೆಯಿಡುವ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಸ್ತುತ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ಶಂಕಿತ ಆರೋಪಿಯನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಶಂಕಿತ ವ್ಯಕ್ತಿಯನ್ನು ಛತ್ತೀಸ್‌ಗಢದ ರಾಯ್‌ಪುರ ನಿವಾಸಿ ಫೈಜಾನ್ ಖಾನ್ ಎಂದು ಗುರುತಿಸಲಾಗಿದೆ.

ಖ್ಯಾತ ಬಾಲಿವುಡ್ ತಾರೆ ಶಾರೂಕ್ ಖಾನ್ ನಿಂದ ಸುಲಿಗೆಗೆ ಬೇಡಿಕೆಯಿಡುವ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಸ್ತುತ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಶಾರೂಕ್ ಖಾನ್ ಅವರ ಮುಂಬೈ ನಿವಾಸವಾದ ಮನ್ನತ್‌ನ ಹೊರಗೆ ಇರುವುದಾಗಿ ಹೇಳಿ 50 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದನು. ತನ್ನ ಬೇಡಿಕೆ ಈಡೇರಿಸದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.

ಬೆದರಿಕೆ ಕರೆಯಿಂದ ಎಚ್ಚೆತ್ತ ಮುಂಬೈ ಪೊಲೀಸರು ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ತಂಡವನ್ನು ರಾಯ್‌ಪುರಕ್ಕೆ ಕಳುಹಿಸಿದ್ದಾರೆ. ಶಂಕಿತನ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 308(4) (ಸಾವು ಅಥವಾ ಗಂಭೀರ ಗಾಯದ ಬೆದರಿಕೆಗಳನ್ನು ಒಳಗೊಂಡ ಸುಲಿಗೆ) ಮತ್ತು 351(3)(4) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ವೃತ್ತಿಯಲ್ಲಿ ವಕೀಲರಾಗಿರುವ ಶಂಕಿತ ಆರೋಪಿ ಬೆದರಿಕೆಯಲ್ಲಿ ಭಾಗಿಯಾಗಿಲ್ಲ. ನವೆಂಬರ್ 2 ರಂದು ಆತನ ಫೋನ್ ಕದಿಯಲಾಗಿತ್ತು ಎಂದು ಹೇಳಲಾಗುತ್ತಿದ್ದು, ಆ ಸಂಖ್ಯೆಯಿಂದ ಮಾಡಿದ ಬೆದರಿಕೆ ಕರೆ ತನ್ನ ವಿರುದ್ಧದ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಮುಂಬೈ ಪೊಲೀಸರು ಫೈಜಾನ್ ಅವರನ್ನು ಟ್ರಾನ್ಸಿಟ್ ರಿಮಾಂಡ್ ಕೋರಿ ರಾಯ್‌ಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. ರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಹ ನಟ ಸಲ್ಮಾನ್ ಖಾನ್‌ಗೆ ಸರಣಿ ಬೆದರಿಕೆಗಳು ಬಂದ ನಂತರ ಶಾರುಖ್ ಖಾನ್‌ಗೆ ಬೆದರಿಕೆ ಹಾಕಲಾಗಿದೆ.

ಮೊನ್ನೆ ಅಕ್ಟೋಬರ್ 24 ರಂದು ಮುಂಬೈ ಪೊಲೀಸರು ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೆದರಿಕೆಯೊಡ್ಡಲಾಗಿತ್ತು. ಮುಂಬೈ ಸಂಚಾರ ಪೊಲೀಸರಿಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸದ್ಯಕ್ಕೆ ಇಬ್ಬರೂ ನಟರ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕಳೆದ ಏಪ್ರಿಲ್‌ನಲ್ಲಿ ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ನಂತರ ಸಲ್ಮಾನ್ ಖಾನ್ ಭದ್ರತೆಯನ್ನು Y+ ಗೆ ಹೆಚ್ಚಿಸಲಾಗಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪಠಾಣ್ ಮತ್ತು ಜವಾನ್ ಚಿತ್ರಗಳ ಯಶಸ್ಸಿನ ನಂತರ ಶಾರೂಕ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬಂದವು. ಈ ಬಗ್ಗೆ ನಟ ಮಹಾರಾಷ್ಟ್ರ ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ನಂತರ ಅವರಿಗೆ Y+ ಭದ್ರತೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT