ಮಲ್ಲಿಕಾರ್ಜುನ್ ಖರ್ಗೆ-ಯೋಗಿ ಆದಿತ್ಯನಾಥ್ 
ದೇಶ

ಓಲೈಕೆಗೆ ಬಿದ್ದು ಮುಸ್ಲಿಂರ ಅಗ್ನಿಜ್ವಾಲೆಗೆ ಬಲಿಯಾದ ನಿಮ್ಮ ತಾಯಿಯ ತ್ಯಾಗವನ್ನೇ ಮರೆತೀರಾ: ಖರ್ಗೆಗೆ ಇತಿಹಾಸ ನೆನಪಿಸಿದ ಯೋಗಿ

ಖರ್ಗೆಯವರ ಗ್ರಾಮವು ಹೈದರಾಬಾದ್ ನಿಜಾಮರ ಅಧೀನದ ಗ್ರಾಮವಾಗಿತ್ತು. ಭಾರತ ಬ್ರಿಟಿಷರ ಅಧೀನದಲ್ಲಿದ್ದಾಗ ಕಾಂಗ್ರೆಸ್‌ ನ ಅಂದಿನ ನಾಯಕತ್ವ ಮುಸ್ಲಿಂ ಲೀಗ್‌ನ ಸಹಯೋಗದಲ್ಲಿ ಮೌನ ವಹಿಸಿತ್ತು.

ನವದೆಹಲಿ: ಮಹಾರಾಷ್ಟ್ರದ ಅಚಲಪುರದಲ್ಲಿ ಸಿಎಂ ಯೋಗಿ ಆದಿತ್ಯನಾಥ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದು ಈ ವೇಳೆ ನಾನೊಬ್ಬ ಯೋಗಿ, ಯೋಗಿಗೆ ದೇಶವೇ ಮೊದಲು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿಮಗೆ ತುಷ್ಟೀಕರಣ ನೀತಿ ಮೊದಲು. ನಾನು ಖರ್ಗೆ ಅವರಿಗೆ ಹೇಳುತ್ತಿದ್ದೇನೆ. ಒಬ್ಬ ಯೋಗಿಗೆ ದೇಶವು ಮೊದಲು ಬರುತ್ತದೆ. ನನ್ನ ನಾಯಕ ಮೋದಿಯವರಿಗೂ ದೇಶವೇ ಮೊದಲು. ಆದರೆ ನಿಮಗೆ ಕಾಂಗ್ರೆಸ್ ತುಷ್ಟೀಕರಣವೇ ಮೊದಲು ಎಂದು ಹೇಳಿದರು.

ಖರ್ಗೆಯವರ ಗ್ರಾಮವು ಹೈದರಾಬಾದ್ ನಿಜಾಮರ ಅಧೀನದ ಗ್ರಾಮವಾಗಿತ್ತು. ಭಾರತ ಬ್ರಿಟಿಷರ ಅಧೀನದಲ್ಲಿದ್ದಾಗ ಕಾಂಗ್ರೆಸ್‌ ನ ಅಂದಿನ ನಾಯಕತ್ವ ಮುಸ್ಲಿಂ ಲೀಗ್‌ನ ಸಹಯೋಗದಲ್ಲಿ ಮೌನ ವಹಿಸಿತ್ತು. ಆದ್ದರಿಂದಲೇ ಆ ಸಮಯದಲ್ಲಿ ಮುಸ್ಲಿಂ ಲೀಗ್ ಹಿಂದೂಗಳನ್ನು ಆಯ್ದು ಕೊಲ್ಲುತ್ತಿತ್ತು. ಇದೇ ಬೆಂಕಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಗ್ರಾಮವೂ ಸುಟ್ಟು ಕರಕಲಾಗಿದ್ದು, ಅವರ ತಾಯಿ ಹಾಗೂ ಕುಟುಂಬದವರು ಸಾವನ್ನಪ್ಪಿದ್ದರು. ಆದರೆ ಖರ್ಗೆಯವರು ಇದನ್ನು ಹೇಳುವುದಿಲ್ಲ ಏಕೆಂದರೆ ಅವರು ಆ ಮಾತುಗಳನ್ನು ಆಡಿದರೆ ಮುಸ್ಲಿಂ ಮತಗಳು ನುಣುಚಿಕೊಳ್ಳುತ್ತವೆ ಎಂದು ತಿಳಿದಿದೆ. ಮತ ಬ್ಯಾಂಕ್‌ಗಾಗಿ ಕುಟುಂಬದವರ ತ್ಯಾಗವನ್ನು ಖರ್ಗೆ ಮರೆತಿದ್ದಾರೆ ಎಂದರು.

ಇದಕ್ಕೂ ಮೊದಲು ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್‌ನಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಸಂತರ ಬಗ್ಗೆ ಮಾತನಾಡಿದ್ದು, ಈಗ ಅನೇಕ ಸಾಧುಗಳು ರಾಜಕಾರಣಿಗಳಾಗಿದ್ದಾರೆ. ಅವರು ಕೇಸರಿ ಬಟ್ಟೆಗಳನ್ನು ಧರಿಸಿ ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ ಮತ್ತು ಜನರನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಯೋಗಿ ಖಡಕ್ ಆಗಿ ಉತ್ತರಿಸಿದ್ದು ಒಡೆದರೆ ಒಡೆದಂತಾಗುತ್ತದೆ ಎಂಬ ಹೇಳಿಕೆ ಸಂತರ ಹೇಳಿಕೆಯೇ? ಅಂತಹ ಹೇಳಿಕೆಯನ್ನು ಯಾವುದೇ ಸಂತರು ನೀಡಲು ಸಾಧ್ಯವಿಲ್ಲ. ಭಯೋತ್ಪಾದಕರು ಇದನ್ನು ಹೇಳಬಹುದು. ನಾವಲ್ಲ. ನಾಥ ಪಂಥದ ಯಾವ ಸಂತನೂ ಇಂಥ ಮಾತನ್ನು ಹೇಳಲಾರ. ನಾವು ಭಯಗೊಂಡರೆ ನಾವು ಸಾಯುತ್ತೇವೆ, ನಾವು ಹೆದರುವುದಿಲ್ಲ ಎಂದು ಯೋಗಿ ಹೇಳಿದ್ದಾರೆ.

ಖರ್ಗೆ ಹೇಳಿಕೆಗೆ ತೀವ್ರ ಟೀಕೆ

ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆ ಇದೀಗ ವಿವಾದದ ರೂಪ ಪಡೆದುಕೊಂಡಿದ್ದು, ಬಿಜೆಪಿ ಹಾಗೂ ಸಂತ ಸಮಾಜದಿಂದ ಈ ಬಗ್ಗೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಧಾರ್ಮಿಕ ಭಾವನೆ ಕೆರಳಿಸುವ ಆರೋಪ ಮಾಡುತ್ತಿದ್ದಾರೆ. ಖರ್ಗೆಯವರ ಹೇಳಿಕೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೂ ವಾಗ್ದಾಳಿ ನಡೆಸಿದವು. ಇದು ಕಾಂಗ್ರೆಸ್‌ನ ಹಳೆಯ ಮನಸ್ಥಿತಿ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮೊದಲಿನಿಂದಲೂ ಸುಳ್ಳು ಹೇಳಿ ಸಮಾಜದಲ್ಲಿ ಬಿರುಕು ಮೂಡಿಸಿದ ಇತಿಹಾಸವಿದೆ. ಕಾಂಗ್ರೆಸ್ ಎಂದಿಗೂ ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯನ್ನು ಗೌರವಿಸಲಿಲ್ಲ. ಕಾಂಗ್ರೆಸ್ ಪಕ್ಷವನ್ನು ಮೊಘಲ್ ದಾಳಿಕೋರರಿಗೆ ಹೋಲಿಸಿದ ಬ್ರಜೇಶ್ ಪಾಠಕ್ ತಕ್ಷಣ ಕ್ಷಮೆಯಾಚಿಸಬೇಕೆಂದು ಕೇಳಿಕೊಂಡರು. ಒಡೆದು ಅಧಿಕಾರ ಪಡೆಯುವುದೇ ಕಾಂಗ್ರೆಸ್‌ನ ಇತಿಹಾಸ ಎಂದು ಸಚಿವ ಓಂ ಪ್ರಕಾಶ್ ರಾಜ್‌ಭರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT