ಅಭಯ್ ಕುಮಾರ್ ಸಿಂಗ್  
ದೇಶ

ಸ್ವಇಚ್ಛೆಯಿಂದಲೇ ರಷ್ಯಾ ಸೇನೆಗೆ ಭಾರತೀಯರ ಸೇರ್ಪಡೆ : ಭಾರತೀಯ ಮೂಲದ ರಷ್ಯಾ ಶಾಸಕ ಹೇಳಿಕೆ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಅಭಯ್ ಕುಮಾರ್ ಸಿಂಗ್ ಬೇರೆ ನೌಕರಿಯಂತೆ ರಷ್ಯಾದ ಸೈನ್ಯಕ್ಕೆ ಸೇರಲು ಬಯಸುವ ಜನರು ಪ್ರಪಂಚದಾದ್ಯಂತ ಇದ್ದಾರೆ ಎಂದು ತಿಳಿಸಿದರು.

ನವದೆಹಲಿ: ರಷ್ಯಾದ ಸೈನ್ಯದಲ್ಲಿ ಕೆಲಸ ಮಾಡುವಂತೆ ಭಾರತೀಯರನ್ನು ಒತ್ತಾಯಪಡಿಸುತ್ತಿಲ್ಲ,ಅವರು ಹಣ ಸಂಪಾದಿಸಲು ತಾವಾಗಿಯೇ ಬರುತ್ತಾರೆ ಮತ್ತು ಅದಕ್ಕಾಗಿ ಒಪ್ಪಂದಗಳಿಗೆ ಸಹಿ ಹಾಕುತ್ತಿದ್ದಾರೆ ಎಂಬುದು ನನ್ನ ವಯಕ್ತಿಕ ಅಭಿಪ್ರಾಯವಾಗಿದೆ ಎಂದು ರಷ್ಯಾದ ಕುರ್ಸ್ಕ್‌ನಲ್ಲಿರುವ ಶಾಸಕ ಅಭಯ್ ಕುಮಾರ್ ಸಿಂಗ್ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಅಭಯ್ ಕುಮಾರ್ ಸಿಂಗ್ ಬೇರೆ ನೌಕರಿಯಂತೆ ರಷ್ಯಾದ ಸೈನ್ಯಕ್ಕೆ ಸೇರಲು ಬಯಸುವ ಜನರು ಪ್ರಪಂಚದಾದ್ಯಂತ ಇದ್ದಾರೆ ಎಂದು ತಿಳಿಸಿದರು.

ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಪುಟಿನ್ ಅವರೊಂದಿಗೆ ಸಮಸ್ಯೆಯನ್ನು ಪ್ರಸ್ತಾಪಿಸಿದ ನಂತರ, 35 ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸೆಪ್ಟೆಂಬರ್‌ನಲ್ಲಿ ತಿಳಿಸಿದೆ. ಪ್ರಧಾನಿಯವರ ಭೇಟಿಗೆ ಮುನ್ನ 10 ಮಂದಿ ಸೇರಿದಂತೆ ಒಟ್ಟು 45 ಭಾರತೀಯರನ್ನು ಬಿಡುಗಡೆ ಮಾಡಿದೆ. ಸಂಘರ್ಷದಲ್ಲಿ ಕನಿಷ್ಠ ಒಂಬತ್ತು ಭಾರತೀಯರು ಸಾವನ್ನಪ್ಪಿದ್ದಾರೆ.

ರಷ್ಯಾದ ಮೊದಲ ಉಪಪ್ರಧಾನಿ ಡೆನಿಸ್ ಮಂಟುರೊವ್ ಅವರೊಂದಿಗೆ ಭಾರತಕ್ಕೆ ಬಂದ ನಿಯೋಗದಲ್ಲಿ ಡಾಯ ಅಭಯ್ ಕುಮರ್ ಸಿಂಗ್ ಕೂಡ ಇದ್ದರು. ಅವರು ಗಡಿ ರಾಜ್ಯವಾದ ಕುರ್ಸ್ಕ್‌ನಿಂದ ಶಾಸಕರಾಗಿ ಎರಡು ಬಾರಿ (2017, 2022) ಚುನಾಯಿತರಾಗಿದ್ದಾರೆ, ಅಲ್ಲಿ ಪ್ರಸ್ತುತ ಉಕ್ರೇನ್‌ನ ಗಡಿಯಲ್ಲಿ ಭಾರಿ ಮಿಲಿಟರಿ ನಿಯೋಜಿಸಲಾಗಿದೆ. ಸಿಂಗ್ 1991 ರಲ್ಲಿ ವೈದ್ಯಕೀಯ ಅಧ್ಯಯನಕ್ಕಾಗಿ ವಿದ್ಯಾರ್ಥಿಯಾಗಿ ಪಾಟ್ನಾದಿಂದ ಕುರ್ಸ್ಕ್‌ಗೆ ತೆರಳಿದರು. ಫಾರ್ಮಾ ವ್ಯವಹಾರದಲ್ಲಿ ತೊಡಗಿ ನಂತರ ರಿಯಲ್ ಎಸ್ಟೇಟ್‌ಗೆ ಉದ್ಯಮದಲ್ಲಿದ್ದು, ಆದಾದ ನಂತರ ಅವರು ಮುಖ್ಯವಾಹಿನಿಯ ರಾಜಕೀಯಕ್ಕೆ ಸೇರಿದರು.

ನಾನು ಮೊದಲ ಬಾರಿಗೆ ಕುರ್ಸ್ಕ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿದಾಗ, ಜನರು ನನ್ನೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರಿಂದ ನಾನು ಪ್ರಚಂಡ ಗೆಲುವು ಸಾಧಿಸಿದೆ. ನನ್ನ ಬೇರುಗಳು ಭಾರತದಲ್ಲಿದ್ದರೂ ನಾನು ಈಗ ಅವರಿಗೆ ಸೇರಿದ್ದೇನೆ" ಎಂದು ಸಿಂಗ್ ಹೇಳಿದ್ದಾರೆ. "ಭಾರತ ಮತ್ತು ರಷ್ಯಾ ನಡುವಿನ ವ್ಯಾಪಾರವು ಏರುಗತಿಯಲ್ಲಿದ್ದುಎರಡು ಸರ್ಕಾರಗಳ ನಡುವೆ ಮಾತ್ರವಲ್ಲದೆ ಜನರೊಂದಿಗೆ ಜನರಿಗೆ ಉತ್ತಮ ಬಾಂಧವ್ಯವಿದೆ. ಶೀಘ್ರದಲ್ಲೇ ಶಾಂತಿ ನೆಲೆಸುತ್ತದೆ ಮತ್ತು ಸಂಘರ್ಷವು ಕೊನೆಗೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT