ಪ್ರಧಾನಿ ಮೋದಿ - ನಿತೀಶ್ ಕುಮಾರ್ 
ದೇಶ

ನಿತೀಶ್ ಕುಮಾರ್ ಬಿಹಾರವನ್ನು ಜಂಗಲ್ ರಾಜ್‌ನಿಂದ ಹೊರ ತಂದಿದ್ದಾರೆ: ಪ್ರಧಾನಿ ಮೋದಿ

"ಜಂಗಲ್ ರಾಜ್ ಯುಗದಿಂದ ರಾಜ್ಯವನ್ನು ಹೊರತರುವ ಮೂಲಕ ನಿತೀಶ್ ಕುಮಾರ್ ಅವರು ಉತ್ತಮ ಆಡಳಿತದ ಮಾದರಿಯನ್ನು ಸ್ಥಾಪಿಸಿದ್ದಾರೆ ಎಂದು ಜೆಡಿಯು ಮುಖ್ಯಸ್ಥರ ಸಮ್ಮುಖದಲ್ಲಿ ಪ್ರಧಾನಿ ಹೇಳಿದರು.

ದರ್ಭಾಂಗ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯವನ್ನು 'ಜಂಗಲ್ ರಾಜ್'ನಿಂದ ಹೊರ ತಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ದರ್ಭಾಂಗದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(AIIMS)ಗೆ ಅಡಿಗಲ್ಲು ಸಮಾರಂಭ ಮತ್ತು ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದರು.

"ಜಂಗಲ್ ರಾಜ್ ಯುಗದಿಂದ ರಾಜ್ಯವನ್ನು ಹೊರತರುವ ಮೂಲಕ ನಿತೀಶ್ ಕುಮಾರ್ ಅವರು ಉತ್ತಮ ಆಡಳಿತದ ಮಾದರಿಯನ್ನು ಸ್ಥಾಪಿಸಿದ್ದಾರೆ ಎಂದು ಜೆಡಿಯು ಮುಖ್ಯಸ್ಥರ ಸಮ್ಮುಖದಲ್ಲಿ ಪ್ರಧಾನಿ ಹೇಳಿದರು.

ಎನ್‌ಡಿಎ ಸರ್ಕಾರದ ಅಡಿಯಲ್ಲಿ ಬಿಹಾರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ, ವಿಶೇಷವಾಗಿ ಆರೋಗ್ಯ ಮೂಲಸೌಕರ್ಯದಲ್ಲಿ ಸುಧಾರಣೆಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದರು.

"ಬಿಹಾರ ಸಾಕಷ್ಟು ಅಭಿವೃದ್ಧಿಗೆ ಸಾಕ್ಷಿಯಾಗುತ್ತಿದೆ. ಎನ್‌ಡಿಎ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದರು.

ಹಿಂದೆ ಆಡಳಿತದಲ್ಲಿದ್ದ ಪಕ್ಷ ಕೇವಲ ಸುಳ್ಳು ಭರವಸೆಗಳನ್ನು ನೀಡಿತ್ತು. ಆದರೆ ನಿತೀಶ್ ಕುಮಾರ್ ಜಿ ಅಧಿಕಾರಕ್ಕೆ ಬಂದ ನಂತರ ಬಿಹಾರದ ಪರಿಸ್ಥಿತಿ ಸುಧಾರಿಸಿದೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT