ಪ್ರಧಾನಿ ಮೋದಿ online desk
ದೇಶ

ಎಂವಿಎ ನಿಮ್ಮನ್ನು ಭಿಕ್ಷೆ ಕೇಳುವಂತೆ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ

ಅಗಾಡಿಯ ಮೈತ್ರಿಕೂಟ ಪ್ರತಿ ಹನಿ ನೀರಿಗೂ ನಿನ್ನನ್ನು ಬೇಡುವಂತೆ ಮಾಡುತ್ತದೆ. ಅದಕ್ಕಾಗಿಯೇ ಮೈತ್ರಿಕೂಟವನ್ನು ಅಧಿಕಾರಕ್ಕೆ ಬರಲು ಸಹ ಬಿಡಬೇಡಿ ಎಂದು ನಾನು ತಾಯಿ ಮತ್ತು ಸಹೋದರಿಯರಿಗೆ ಹೇಳುತ್ತೇನೆ ಎಂದು ಮೋದಿ ತಿಳಿಸಿದ್ದಾರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ಮೋದಿ ಮಹಾ ವಿಕಾಸ್ ಅಘಾಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ, ಅದು ಚುನಾವಣೆಗೆ ಒಳಪಟ್ಟಿರುವ ರಾಜ್ಯದಲ್ಲಿ ಬರಗಾಲ ಮತ್ತು ನೀರಿನ ಸಮಸ್ಯೆಯ ಯುಗವನ್ನು ಮರಳಿ ತರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಅಗಾಡಿಯ ಮೈತ್ರಿಕೂಟ ಪ್ರತಿ ಹನಿ ನೀರಿಗೂ ನಿನ್ನನ್ನು ಬೇಡುವಂತೆ ಮಾಡುತ್ತದೆ. ಅದಕ್ಕಾಗಿಯೇ ಮೈತ್ರಿಕೂಟವನ್ನು ಅಧಿಕಾರಕ್ಕೆ ಬರಲು ಸಹ ಬಿಡಬೇಡಿ ಎಂದು ನಾನು ತಾಯಿ ಮತ್ತು ಸಹೋದರಿಯರಿಗೆ ಹೇಳುತ್ತೇನೆ ಎಂದು ಮೋದಿ ತಿಳಿಸಿದ್ದಾರೆ

ನವೆಂಬರ್ 20 ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದ ಛತ್ರಪತಿ ಸಂಭಾಜಿ ನಗರ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸೇರಿದಂತೆ ಎನ್‌ಡಿಎ ನಾಯಕರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು.

"ಮರಾಠವಾಡದಲ್ಲಿ ಬಹಳ ಸಮಯದಿಂದ ನೀರಿನ ಸಮಸ್ಯೆ ಇದೆ, ಆದರೆ ಕಾಂಗ್ರೆಸ್ ಮತ್ತು ಅಘಾಡಿ ಜನರು ಯಾವಾಗಲೂ ಸುಮ್ಮನೆ ಕುಳಿತಿದ್ದಾರೆ. ನಮ್ಮ ಸರ್ಕಾರದಲ್ಲಿ ಮೊದಲ ಬಾರಿಗೆ ಬರಗಾಲದ ವಿರುದ್ಧ ಹೋರಾಡಲು ಗಂಭೀರ ಪ್ರಯತ್ನಗಳು ಪ್ರಾರಂಭವಾದವು" ಎಂದು ಮೋದಿ ಹೇಳಿದ್ದಾರೆ.

ಔರಂಗಾಬಾದ್ ನ್ನು ಛತ್ರಪತಿ ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವುದು ದಿವಂಗತ ನಾಯಕನ ಇಚ್ಛೆ ಎಂದು ಹೇಳುವ ಮೂಲಕ, ಬಾಳಾಸಾಹೇಬ್ ಠಾಕ್ರೆ ಅವರ ಆಶಯಗಳನ್ನು ಎಂವಿಎ ಮೈತ್ರಿ ಗೌರವಿಸಲಿಲ್ಲ ಎಂಬುದನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು.

ಛತ್ರಪತಿ ಸಂಭಾಜಿ ನಗರಕ್ಕೆ ಈ ಹೆಸರನ್ನು ಇಡಬೇಕೆಂಬ ಬೇಡಿಕೆಯನ್ನು ಬಾಳಾಸಾಹೇಬ್ ಠಾಕ್ರೆ ಎತ್ತಿದ್ದರು ಎಂಬುದು ಇಡೀ ಮಹಾರಾಷ್ಟ್ರಕ್ಕೆ ತಿಳಿದಿದೆ, ಅಘಾಡಿ ಸರ್ಕಾರ 2.5 ವರ್ಷಗಳ ಕಾಲ ಅಧಿಕಾರದಲ್ಲಿತ್ತು, ಆದರೆ ಈ ಜನರಿಗೆ ಧೈರ್ಯ ಇರಲಿಲ್ಲ, ಕಾಂಗ್ರೆಸ್ ಒತ್ತಡಕ್ಕೆ ಮಣಿದಿದ್ದಾರೆ ಎಂದು ಅಘಾಡಿ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೀಕರ ಭೂಕುಸಿತದಲ್ಲಿ 14 ಸಾವು, ಸಿಕ್ಕಿಂ ಸಂಪರ್ಕ ಕಡಿತ

ಡೊನಾಲ್ಡ್ ಟ್ರಂಪ್ ಕರೆಗೂ ನಿಲ್ಲದ ಘರ್ಷಣೆ: ಇಸ್ರೇಲ್ ದಾಳಿಗೆ ಗಾಜಾದಲ್ಲಿ ಕನಿಷ್ಠ 60 ಮಂದಿ ಸಾವು

Cricket: ಕೇವಲ 141 ಎಸೆತಗಳಲ್ಲಿ ಬರೊಬ್ಬರಿ 314 ರನ್ ಚಚ್ಚಿದ ಭಾರತ ಮೂಲದ ಆಸಿಸ್ ಕ್ರಿಕೆಟಿಗ Harjas Singh, ಇತಿಹಾಸ ನಿರ್ಮಾಣ!

ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ: ಶೇ.50ರಷ್ಟು ಸಚಿವರಿಗೆ ಕೊಕ್..?

ಕೆಮ್ಮಿನ ಸಿರಪ್ ಬಗ್ಗೆ ಕೇಂದ್ರ ಸರ್ಕಾರ ಯೂ-ಟರ್ನ್: ಮಧ್ಯ ಪ್ರದೇಶ, ರಾಜಸ್ತಾನ, ತಮಿಳು ನಾಡು ಬ್ಯಾನ್

SCROLL FOR NEXT