ಪ್ರಧಾನಿ ಮೋದಿ online desk
ದೇಶ

ಎಂವಿಎ ನಿಮ್ಮನ್ನು ಭಿಕ್ಷೆ ಕೇಳುವಂತೆ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ

ಅಗಾಡಿಯ ಮೈತ್ರಿಕೂಟ ಪ್ರತಿ ಹನಿ ನೀರಿಗೂ ನಿನ್ನನ್ನು ಬೇಡುವಂತೆ ಮಾಡುತ್ತದೆ. ಅದಕ್ಕಾಗಿಯೇ ಮೈತ್ರಿಕೂಟವನ್ನು ಅಧಿಕಾರಕ್ಕೆ ಬರಲು ಸಹ ಬಿಡಬೇಡಿ ಎಂದು ನಾನು ತಾಯಿ ಮತ್ತು ಸಹೋದರಿಯರಿಗೆ ಹೇಳುತ್ತೇನೆ ಎಂದು ಮೋದಿ ತಿಳಿಸಿದ್ದಾರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ಮೋದಿ ಮಹಾ ವಿಕಾಸ್ ಅಘಾಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ, ಅದು ಚುನಾವಣೆಗೆ ಒಳಪಟ್ಟಿರುವ ರಾಜ್ಯದಲ್ಲಿ ಬರಗಾಲ ಮತ್ತು ನೀರಿನ ಸಮಸ್ಯೆಯ ಯುಗವನ್ನು ಮರಳಿ ತರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಅಗಾಡಿಯ ಮೈತ್ರಿಕೂಟ ಪ್ರತಿ ಹನಿ ನೀರಿಗೂ ನಿನ್ನನ್ನು ಬೇಡುವಂತೆ ಮಾಡುತ್ತದೆ. ಅದಕ್ಕಾಗಿಯೇ ಮೈತ್ರಿಕೂಟವನ್ನು ಅಧಿಕಾರಕ್ಕೆ ಬರಲು ಸಹ ಬಿಡಬೇಡಿ ಎಂದು ನಾನು ತಾಯಿ ಮತ್ತು ಸಹೋದರಿಯರಿಗೆ ಹೇಳುತ್ತೇನೆ ಎಂದು ಮೋದಿ ತಿಳಿಸಿದ್ದಾರೆ

ನವೆಂಬರ್ 20 ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದ ಛತ್ರಪತಿ ಸಂಭಾಜಿ ನಗರ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸೇರಿದಂತೆ ಎನ್‌ಡಿಎ ನಾಯಕರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು.

"ಮರಾಠವಾಡದಲ್ಲಿ ಬಹಳ ಸಮಯದಿಂದ ನೀರಿನ ಸಮಸ್ಯೆ ಇದೆ, ಆದರೆ ಕಾಂಗ್ರೆಸ್ ಮತ್ತು ಅಘಾಡಿ ಜನರು ಯಾವಾಗಲೂ ಸುಮ್ಮನೆ ಕುಳಿತಿದ್ದಾರೆ. ನಮ್ಮ ಸರ್ಕಾರದಲ್ಲಿ ಮೊದಲ ಬಾರಿಗೆ ಬರಗಾಲದ ವಿರುದ್ಧ ಹೋರಾಡಲು ಗಂಭೀರ ಪ್ರಯತ್ನಗಳು ಪ್ರಾರಂಭವಾದವು" ಎಂದು ಮೋದಿ ಹೇಳಿದ್ದಾರೆ.

ಔರಂಗಾಬಾದ್ ನ್ನು ಛತ್ರಪತಿ ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವುದು ದಿವಂಗತ ನಾಯಕನ ಇಚ್ಛೆ ಎಂದು ಹೇಳುವ ಮೂಲಕ, ಬಾಳಾಸಾಹೇಬ್ ಠಾಕ್ರೆ ಅವರ ಆಶಯಗಳನ್ನು ಎಂವಿಎ ಮೈತ್ರಿ ಗೌರವಿಸಲಿಲ್ಲ ಎಂಬುದನ್ನು ಪ್ರಧಾನಮಂತ್ರಿ ಉಲ್ಲೇಖಿಸಿದರು.

ಛತ್ರಪತಿ ಸಂಭಾಜಿ ನಗರಕ್ಕೆ ಈ ಹೆಸರನ್ನು ಇಡಬೇಕೆಂಬ ಬೇಡಿಕೆಯನ್ನು ಬಾಳಾಸಾಹೇಬ್ ಠಾಕ್ರೆ ಎತ್ತಿದ್ದರು ಎಂಬುದು ಇಡೀ ಮಹಾರಾಷ್ಟ್ರಕ್ಕೆ ತಿಳಿದಿದೆ, ಅಘಾಡಿ ಸರ್ಕಾರ 2.5 ವರ್ಷಗಳ ಕಾಲ ಅಧಿಕಾರದಲ್ಲಿತ್ತು, ಆದರೆ ಈ ಜನರಿಗೆ ಧೈರ್ಯ ಇರಲಿಲ್ಲ, ಕಾಂಗ್ರೆಸ್ ಒತ್ತಡಕ್ಕೆ ಮಣಿದಿದ್ದಾರೆ ಎಂದು ಅಘಾಡಿ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಗಳ ಭರ್ಜರಿ ಜಯ

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

IDFC First Bank ವಂಚನೆ ಪ್ರಕರಣ: ತನಿಖೆಗೆ ಆದೇಶಿಸಿದ ಹರಿಯಾಣ CM ಸೈನಿ

SCROLL FOR NEXT