ರಾಜ್ ಠಾಕ್ರೆ 
ದೇಶ

ಇನ್ನೂ ಸಿಗದ EC ಅನುಮತಿ; ಶಿವಾಜಿ ಪಾರ್ಕ್ ರ‍್ಯಾಲಿ ರದ್ದುಗೊಳಿಸಿದ MNS

ಶಿವಾಜಿ ಪಾರ್ಕ್ ರ‍್ಯಾಲಿ ಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಅವರು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನವೆಂಬರ್ 17 ರಂದು ನಿಗದಿಯಾಗಿದ್ದ ರ‍್ಯಾಲಿಯನ್ನು ಶುಕ್ರವಾರ ರದ್ದುಗೊಳಿಸಿದ್ದಾರೆ.

ತಮ್ಮ ಶಿವಾಜಿ ಪಾರ್ಕ್ ರ‍್ಯಾಲಿಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ರ‍್ಯಾಲಿ ಬದಲಾಗಿ, ಎಂಎನ್‌ಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಮುಂಬೈ ಮತ್ತು ಥಾಣೆಯ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವುದಾಗಿ ಠಾಕ್ರೆ ಹೇಳಿದ್ದಾರೆ.

"ನನಗೆ ಇನ್ನೂ ಚುನಾವಣಾ ಆಯೋಗದ ಅನುಮತಿ ಸಿಕ್ಕಿಲ್ಲ ಮತ್ತು ರ‍್ಯಾಲಿಗೆ ಕೇವಲ ಒಂದೂವರೆ ದಿನ ಇದೆ. ಈ ಒಂದೂವರೆ ದಿನದಲ್ಲಿ ರ‍್ಯಾಲಿಗೆ ಸಿದ್ಧತೆ ಮಾಡಿಕೊಳ್ಳುವುದು ಕಷ್ಟಕರ. ಬದಲಿಗೆ, ನಾನು ಮುಂಬೈ ಮತ್ತು ಥಾಣೆಯ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ" ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಶಿವಸೇನೆ(ಯುಬಿಟಿ) ಮತ್ತು ಎಂಎನ್‌ಎಸ್ ನವೆಂಬರ್ 17 ರಂದು ಐಕಾನಿಕ್ ಶಿವಾಜಿ ಪಾರ್ಕ್‌ನಲ್ಲಿ ರ‍್ಯಾಲಿ ನಡೆಸಲು ಅನುಮತಿ ಕೋರಿದ್ದವು. ಉದ್ದೇಶಿತ ಕಾರ್ಯಕ್ರಮಕ್ಕೆ ಎರಡೂ ಪಕ್ಷಗಳು ಇನ್ನೂ EC ಅನುಮತಿ ಪಡೆದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿನಿಂದ ಹೊರಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?

ವಿಮಾನದಲ್ಲಿ ಅಮೆರಿಕ ಯುವತಿ ಅಸ್ವಸ್ಥ: ಚಿಕಿತ್ಸೆ ನೀಡಿ ಪ್ರಾಣ ಕಾಪಾಡಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್!

ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿ ಸೋರಿಕೆ: ಅಸ್ಸಾಂ ನಲ್ಲಿ ವಾಯುಪಡೆಯ ನಿವೃತ್ತ ಅಧಿಕಾರಿ, ಕಾಶ್ಮೀರಿಗಳ ಬಂಧನ

SCROLL FOR NEXT