ರಾಜ್ ಠಾಕ್ರೆ 
ದೇಶ

ಇನ್ನೂ ಸಿಗದ EC ಅನುಮತಿ; ಶಿವಾಜಿ ಪಾರ್ಕ್ ರ‍್ಯಾಲಿ ರದ್ದುಗೊಳಿಸಿದ MNS

ಶಿವಾಜಿ ಪಾರ್ಕ್ ರ‍್ಯಾಲಿ ಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಅವರು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನವೆಂಬರ್ 17 ರಂದು ನಿಗದಿಯಾಗಿದ್ದ ರ‍್ಯಾಲಿಯನ್ನು ಶುಕ್ರವಾರ ರದ್ದುಗೊಳಿಸಿದ್ದಾರೆ.

ತಮ್ಮ ಶಿವಾಜಿ ಪಾರ್ಕ್ ರ‍್ಯಾಲಿಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ರ‍್ಯಾಲಿ ಬದಲಾಗಿ, ಎಂಎನ್‌ಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಮುಂಬೈ ಮತ್ತು ಥಾಣೆಯ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವುದಾಗಿ ಠಾಕ್ರೆ ಹೇಳಿದ್ದಾರೆ.

"ನನಗೆ ಇನ್ನೂ ಚುನಾವಣಾ ಆಯೋಗದ ಅನುಮತಿ ಸಿಕ್ಕಿಲ್ಲ ಮತ್ತು ರ‍್ಯಾಲಿಗೆ ಕೇವಲ ಒಂದೂವರೆ ದಿನ ಇದೆ. ಈ ಒಂದೂವರೆ ದಿನದಲ್ಲಿ ರ‍್ಯಾಲಿಗೆ ಸಿದ್ಧತೆ ಮಾಡಿಕೊಳ್ಳುವುದು ಕಷ್ಟಕರ. ಬದಲಿಗೆ, ನಾನು ಮುಂಬೈ ಮತ್ತು ಥಾಣೆಯ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ" ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಶಿವಸೇನೆ(ಯುಬಿಟಿ) ಮತ್ತು ಎಂಎನ್‌ಎಸ್ ನವೆಂಬರ್ 17 ರಂದು ಐಕಾನಿಕ್ ಶಿವಾಜಿ ಪಾರ್ಕ್‌ನಲ್ಲಿ ರ‍್ಯಾಲಿ ನಡೆಸಲು ಅನುಮತಿ ಕೋರಿದ್ದವು. ಉದ್ದೇಶಿತ ಕಾರ್ಯಕ್ರಮಕ್ಕೆ ಎರಡೂ ಪಕ್ಷಗಳು ಇನ್ನೂ EC ಅನುಮತಿ ಪಡೆದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

SCROLL FOR NEXT