ಬಿರ್ಸಾ ಮುಂಡಾಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ 
ದೇಶ

ಸ್ವಾತಂತ್ರ್ಯ ಚಳುವಳಿಗೆ ಆದಿವಾಸಿಗಳ ಕೊಡುಗೆ ಅಪಾರ, ಸೂಕ್ತ ಮನ್ನಣೆ ಸಿಕ್ಕಿಲ್ಲ: ಬಿಹಾರದಲ್ಲಿ ಪ್ರಧಾನಿ ಮೋದಿ

"ಎಲ್ಲಾ ಕ್ರೆಡಿಟ್ ಅನ್ನು ಕೇವಲ ಒಂದು ಪಕ್ಷ ಮತ್ತು ಒಂದು ಕುಟುಂಬಕ್ಕೆ ನೀಡುವ ಪ್ರಯತ್ನವಾಗಿದೆ" ಎಂದು ವಾಗ್ದಾಳಿ ನಡೆಸಿದರು.

ಜಮುಯಿ: ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಬುಡಕಟ್ಟು ಸಮುದಾಯಗಳ ಕೊಡುಗೆಯೂ ಇದೆ. ಆದರೆ ಇದನ್ನು ಗುರುತಿಸುವಲ್ಲಿ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ವಿಫಲವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟೀಕಿಸಿದ್ದಾರೆ.

ಕಾಂಗ್ರೆಸ್ ಅಥವಾ ಯಾವುದೇ ವ್ಯಕ್ತಿಯನ್ನು ಹೆಸರಿಸದೆ ಮೋದಿ, "ಎಲ್ಲಾ ಕ್ರೆಡಿಟ್ ಅನ್ನು ಕೇವಲ ಒಂದು ಪಕ್ಷ ಮತ್ತು ಒಂದು ಕುಟುಂಬಕ್ಕೆ ನೀಡುವ ಪ್ರಯತ್ನವಾಗಿದೆ" ಎಂದು ವಾಗ್ದಾಳಿ ನಡೆಸಿದರು.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಇಂದು ಆಯೋಜಿಸಲಾಗಿದ್ದ ಜಂಜಾಟಿಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಒಂದು ಕುಟುಂಬದಿಂದಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೆ ಬಿರ್ಸಾ ಮುಂಡಾ ‘ಉಲ್ಗುಲನ್’ ಚಳವಳಿಯನ್ನು ಏಕೆ ಆರಂಭಿಸಿದರು’ ಎಂದು ಪ್ರಶ್ನಿಸಿದರು.

ಹಿಂದಿನ ಆಡಳಿತದಲ್ಲಿ ಭಾರತದ ಬುಡಕಟ್ಟು ಸಮುದಾಯಕ್ಕೆ ಸೂಕ್ತ ಮನ್ನಣೆ ದೊರೆತಿಲ್ಲ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ಭಾರತದ ಬುಡಕಟ್ಟು ಸಮುದಾಯಕ್ಕೆ ಈ ಹಿಂದೆ ನ್ಯಾಯ ಸಿಗಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಅನೇಕ ಬುಡಕಟ್ಟು ನಾಯಕರು ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಮೋದಿ ಹೇಳಿದರು.

ಬುಡಕಟ್ಟು ಜನಾಂಗದ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರು ಪ್ರಕೃತಿಯೊಂದಿಗೆ ಆಳವಾದ ನಂಟು ಹೊಂದಿದ್ದಾರೆ ಮತ್ತು ಅವರ ಪರಿಸರ ಸ್ನೇಹಿ ಜೀವನಶೈಲಿಗಾಗಿ ನಾನು ಅವರನ್ನು "ಪೂಜಿಸುತ್ತೇನೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT