ಬಾಂಗ್ಲಾದೇಶಿ ಮಹಿಳೆ TNIE
ದೇಶ

ಗುಜರಾತ್‌: 15 ಸಾವಿರ ಕೊಟ್ಟು ಗಡಿದಾಟಿ ಭಾರತಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಮಹಿಳೆ ಬಂಧನ!

ರಸಿದಾ ಬೇಗಂ ಜಹಾಂಗೀರ್ ಅಲಿ ಶೇಖ್ ಎಂಬ ಮಹಿಳೆ ನಾಲ್ಕು ವರ್ಷಗಳ ಹಿಂದೆ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಳು. ಆರಂಭದಲ್ಲಿ ಒಂದು ವರ್ಷ ಮುಂಬೈನಲ್ಲಿ ವಾಸವಾಗಿದ್ದು ನಂತರ ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿದ್ದು ಅಲ್ಲಿ ಆಕೆ ವಿವಿಧ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು.

ಅಹಮದಾಬಾದ್: ಬಾಂಗ್ಲಾದೇಶದ ಏಜೆಂಟ್‌ಗೆ ಕೇವಲ 15,000 ರೂ. ನೀಡಿ ಗಡಿ ದಾಟಿ ಭಾರತಕ್ಕೆ ಬಂದು ಕೆಲವು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಮೂಲದ ಮಹಿಳೆಯೊಬ್ಬರನ್ನು ಸೂರತ್‌ನ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಪೊಲೀಸರು ಶನಿವಾರ ಬಂಧಿಸಿದ್ದಾರೆ.

ರಸಿದಾ ಬೇಗಂ ಜಹಾಂಗೀರ್ ಅಲಿ ಶೇಖ್ ಎಂಬ ಮಹಿಳೆ ನಾಲ್ಕು ವರ್ಷಗಳ ಹಿಂದೆ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಳು. ಆರಂಭದಲ್ಲಿ ಒಂದು ವರ್ಷ ಮುಂಬೈನಲ್ಲಿ ವಾಸವಾಗಿದ್ದು ನಂತರ ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿದ್ದು ಅಲ್ಲಿ ಆಕೆ ವಿವಿಧ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು.

ನಕಲಿ ದಾಖಲೆಗಳನ್ನು ಬಳಸಿ, ರಸಿದಾ ಹೆಸರಲ್ಲಿ ಆಧಾರ್ ಕಾರ್ಡ್ ಮತ್ತು ಇತರ ಭಾರತೀಯ ಗುರುತಿನ ಚೀಟಿಗಳನ್ನು ಮಾಡಿಸಿಕೊಂಡು ವಾಸಿಸುತ್ತಿದ್ದಳು. ರಸಿದಾ ಬಂಧನದ ವೇಳೆ ಪೊಲೀಸರು ಆಕೆ ಬಾಂಗ್ಲಾದೇಶಿ ಪ್ರಜೆ ಎಂದು ಗುರುತಿಸುವ ದಾಖಲೆಯನ್ನು ಸಹ ವಶಪಡಿಸಿಕೊಂಡಿದ್ದಾರೆ.

ನಾನು ಭಾರತಕ್ಕೆ ಬರಲು ಏಜೆಂಟ್‌ಗೆ 15,000 ಬಾಂಗ್ಲಾದೇಶದ ಟಾಕಾವನ್ನು ನೀಡಿದ್ದೇನೆ ಎಂದು ಸೂರತ್‌ನ ಎಸ್‌ಒಜಿ ವಿಚಾರಣೆಯ ಸಮಯದಲ್ಲಿ ಆಕೆ ಬಹಿರಂಗಪಡಿಸಿದಳು. ಪಶ್ಚಿಮ ಬಂಗಾಳದ ಮೂಲಕ ಭಾರತವನ್ನು ಪ್ರವೇಶಿಸಿದ್ದೇಗೆ, ನಂತರ ರೈಲಿನಲ್ಲಿ ಮುಂಬೈಗೆ ಪ್ರಯಾಣ ಅಂತಿಮವಾಗಿ ಸೂರತ್‌ಗೆ ತಲುಪಿದ್ದು ಅಲ್ಲಿ ಕಳೆದ ಮೂರು ವರ್ಷಗಳಿಂದ ವಿವಿಧ ಸ್ಥಳಗಳಲ್ಲಿ ಕೊಠಡಿಗಳನ್ನು ಬಾಡಿಗೆಗೆ ಪಡೆದಿದ್ದು ಹೇಗೆ ಎಂಬುದನ್ನು ವಿವರಿಸಿದ್ದಾಳೆ.

ರಾಸಿದಾ ಬಾಂಗ್ಲಾದೇಶದ ಬರಂಗಾ ಗ್ರಾಮದವಳು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಜೆಸ್ಸೋರ್ ಜಿಲ್ಲೆಯ ಸಮೀಪವಿರುವ ನಿರ್ಬಂಧಿತ ಗಡಿಯನ್ನು ದಾಟಲು ಆಕೆ ಏಜೆಂಟರನ್ನು ಅನ್ನು ಬಳಸಿಕೊಂಡು ಪಶ್ಚಿಮ ಬಂಗಾಳದ ಬ್ಯಾಂಗನ್ ಮೂಲಕ ಭಾರತವನ್ನು ಪ್ರವೇಶಿಸಿದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT