ಬಾಂಗ್ಲಾದೇಶಿ ಮಹಿಳೆ TNIE
ದೇಶ

ಗುಜರಾತ್‌: 15 ಸಾವಿರ ಕೊಟ್ಟು ಗಡಿದಾಟಿ ಭಾರತಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಮಹಿಳೆ ಬಂಧನ!

ರಸಿದಾ ಬೇಗಂ ಜಹಾಂಗೀರ್ ಅಲಿ ಶೇಖ್ ಎಂಬ ಮಹಿಳೆ ನಾಲ್ಕು ವರ್ಷಗಳ ಹಿಂದೆ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಳು. ಆರಂಭದಲ್ಲಿ ಒಂದು ವರ್ಷ ಮುಂಬೈನಲ್ಲಿ ವಾಸವಾಗಿದ್ದು ನಂತರ ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿದ್ದು ಅಲ್ಲಿ ಆಕೆ ವಿವಿಧ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು.

ಅಹಮದಾಬಾದ್: ಬಾಂಗ್ಲಾದೇಶದ ಏಜೆಂಟ್‌ಗೆ ಕೇವಲ 15,000 ರೂ. ನೀಡಿ ಗಡಿ ದಾಟಿ ಭಾರತಕ್ಕೆ ಬಂದು ಕೆಲವು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಮೂಲದ ಮಹಿಳೆಯೊಬ್ಬರನ್ನು ಸೂರತ್‌ನ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಪೊಲೀಸರು ಶನಿವಾರ ಬಂಧಿಸಿದ್ದಾರೆ.

ರಸಿದಾ ಬೇಗಂ ಜಹಾಂಗೀರ್ ಅಲಿ ಶೇಖ್ ಎಂಬ ಮಹಿಳೆ ನಾಲ್ಕು ವರ್ಷಗಳ ಹಿಂದೆ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಳು. ಆರಂಭದಲ್ಲಿ ಒಂದು ವರ್ಷ ಮುಂಬೈನಲ್ಲಿ ವಾಸವಾಗಿದ್ದು ನಂತರ ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿದ್ದು ಅಲ್ಲಿ ಆಕೆ ವಿವಿಧ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು.

ನಕಲಿ ದಾಖಲೆಗಳನ್ನು ಬಳಸಿ, ರಸಿದಾ ಹೆಸರಲ್ಲಿ ಆಧಾರ್ ಕಾರ್ಡ್ ಮತ್ತು ಇತರ ಭಾರತೀಯ ಗುರುತಿನ ಚೀಟಿಗಳನ್ನು ಮಾಡಿಸಿಕೊಂಡು ವಾಸಿಸುತ್ತಿದ್ದಳು. ರಸಿದಾ ಬಂಧನದ ವೇಳೆ ಪೊಲೀಸರು ಆಕೆ ಬಾಂಗ್ಲಾದೇಶಿ ಪ್ರಜೆ ಎಂದು ಗುರುತಿಸುವ ದಾಖಲೆಯನ್ನು ಸಹ ವಶಪಡಿಸಿಕೊಂಡಿದ್ದಾರೆ.

ನಾನು ಭಾರತಕ್ಕೆ ಬರಲು ಏಜೆಂಟ್‌ಗೆ 15,000 ಬಾಂಗ್ಲಾದೇಶದ ಟಾಕಾವನ್ನು ನೀಡಿದ್ದೇನೆ ಎಂದು ಸೂರತ್‌ನ ಎಸ್‌ಒಜಿ ವಿಚಾರಣೆಯ ಸಮಯದಲ್ಲಿ ಆಕೆ ಬಹಿರಂಗಪಡಿಸಿದಳು. ಪಶ್ಚಿಮ ಬಂಗಾಳದ ಮೂಲಕ ಭಾರತವನ್ನು ಪ್ರವೇಶಿಸಿದ್ದೇಗೆ, ನಂತರ ರೈಲಿನಲ್ಲಿ ಮುಂಬೈಗೆ ಪ್ರಯಾಣ ಅಂತಿಮವಾಗಿ ಸೂರತ್‌ಗೆ ತಲುಪಿದ್ದು ಅಲ್ಲಿ ಕಳೆದ ಮೂರು ವರ್ಷಗಳಿಂದ ವಿವಿಧ ಸ್ಥಳಗಳಲ್ಲಿ ಕೊಠಡಿಗಳನ್ನು ಬಾಡಿಗೆಗೆ ಪಡೆದಿದ್ದು ಹೇಗೆ ಎಂಬುದನ್ನು ವಿವರಿಸಿದ್ದಾಳೆ.

ರಾಸಿದಾ ಬಾಂಗ್ಲಾದೇಶದ ಬರಂಗಾ ಗ್ರಾಮದವಳು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಜೆಸ್ಸೋರ್ ಜಿಲ್ಲೆಯ ಸಮೀಪವಿರುವ ನಿರ್ಬಂಧಿತ ಗಡಿಯನ್ನು ದಾಟಲು ಆಕೆ ಏಜೆಂಟರನ್ನು ಅನ್ನು ಬಳಸಿಕೊಂಡು ಪಶ್ಚಿಮ ಬಂಗಾಳದ ಬ್ಯಾಂಗನ್ ಮೂಲಕ ಭಾರತವನ್ನು ಪ್ರವೇಶಿಸಿದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT