ತೂತುಕುಡಿಯಲ್ಲಿರುವ ವೇದಾಂತದ ಸ್ಟೆರ್ಲೈಟ್ ತಾಮ್ರದ ಘಟಕದ ನೋಟ 
ದೇಶ

ತೂತುಕುಡಿಯಲ್ಲಿ ತಾಮ್ರ ಸ್ಥಾವರ ಘಟಕ ಮುಚ್ಚುವಿಕೆ ವಿರುದ್ಧ ವೇದಾಂತ ಸಲ್ಲಿಸಿದ ಮರುಪರಿಶೀಲನಾ ಅರ್ಜಿ: ಸುಪ್ರೀಂ ಕೋರ್ಟ್ ವಜಾ

ತೂತುಕುಡಿಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟ ನಂತರ ಮೇ 2018 ರಿಂದ ಸ್ಥಾವರವನ್ನು ಮುಚ್ಚಲಾಗಿದೆ.

ನವದೆಹಲಿ: ತಮಿಳುನಾಡಿನ ತೂತುಕುಡಿಯಲ್ಲಿ ಸ್ಟೈರ್ಲೈಟ್ ತಾಮ್ರ ಸ್ಥಾವರ ಘಟಕವನ್ನು ಮುಚ್ಚುವುದರ ವಿರುದ್ಧ ವೇದಾಂತ ಸಮೂಹ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸ್ಥಳೀಯ ನಿವಾಸಿಗಳ ಆರೋಗ್ಯ ಮತ್ತು ಪ್ರಗತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿ, ಮಾಲಿನ್ಯದ ಕಾಳಜಿಯಿಂದ ಮೇ 2018 ರಿಂದ ಮುಚ್ಚಲಾಗಿದ್ದ ತೂತುಕುಡಿಯಲ್ಲಿ ತಾಮ್ರ ಸ್ಥಾವರ ಘಟಕವನ್ನು ಪುನಃ ತೆರೆಯಲು ವೇದಾಂತ ಸಮೂಹ ಸಲ್ಲಿಸಿದ್ದ ಮನವಿಯನ್ನು ಫೆಬ್ರವರಿ 29 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ತೂತುಕುಡಿಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟ ನಂತರ ಮೇ 2018 ರಿಂದ ಸ್ಥಾವರವನ್ನು ಮುಚ್ಚಲಾಗಿದೆ.

ಹಿಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ (ಈಗ ನಿವೃತ್ತ) ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮರುಪರಿಶೀಲನಾ ಅರ್ಜಿಯನ್ನು ಮುಕ್ತ ನ್ಯಾಯಾಲಯದಲ್ಲಿ ಪಟ್ಟಿ ಮಾಡಲು ವೇದಾಂತ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು.

ಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದಾಗ, ದಾಖಲೆಯಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. ಸುಪ್ರೀಂ ಕೋರ್ಟ್ ನಿಯಮಗಳು 2013 ರ ಆದೇಶ XLVII ನಿಯಮ 1 ರ ಅಡಿಯಲ್ಲಿ ಪರಿಶೀಲನೆಗಾಗಿ ಯಾವುದೇ ಪ್ರಕರಣವನ್ನು ಗುರುತಿಸಿಲ್ಲ, ಹಾಗಾಗಿ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ’ ಎಂದು ಪೀಠವು ತನ್ನ ಅಕ್ಟೋಬರ್ 22ರ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT