ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ; 9 ಕಾಶ್ಮೀರಿಗಳ ಬಂಧನ, 9 ರೈಫಲ್‌ ವಶ

ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ.

ಅಹಲ್ಯಾನಗರ: ಮಹಾರಾಷ್ಟ್ರದ ಅಹಲ್ಯಾನಗರ (ಹಿಂದಿನ ಅಹ್ಮದ್‌ನಗರ) ಪೊಲೀಸರು ಮತ್ತು ಮಿಲಿಟರಿ ಗುಪ್ತಚರ, ಸದರ್ನ್ ಕಮಾಂಡ್ ಜಂಟಿ ಕಾರ್ಯಾಚರಣೆಯಲ್ಲಿ ಒಂಬತ್ತು ಕಾಶ್ಮೀರಿಗಳನ್ನು ಬಂಧಿಸಲಾಗಿದ್ದು, ಒಂಬತ್ತು ರೈಫಲ್‌ಗಳು, 58 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಿಂದ ಬಂದಿರುವ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ನಗರಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ನಕಲಿ ಪರವಾನಗಿಗಳೊಂದಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ನಂತರ ತನಿಖೆ ಆರಂಭಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ, ಈ ಶಸ್ತ್ರಾಸ್ತ್ರ ಪರವಾನಗಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಮ್ಮು-ಕಾಶ್ಮೀರ ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಇವುಗಳು ಅಸಲಿ ಅಲ್ಲ ಎಂಬುದು ದೃಢಪಟ್ಟ ನಂತರ ದಾಳಿ ನಡೆಸಲಾಯಿತು ಎಂದು ಅವರು ಹೇಳಿದರು.

ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ. ಬಂಧಿತರೆಲ್ಲರೂ ಜಮ್ಮುವಿನ ರಾಜೌರಿ ಮೂಲದವರು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT