ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ; 9 ಕಾಶ್ಮೀರಿಗಳ ಬಂಧನ, 9 ರೈಫಲ್‌ ವಶ

ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ.

ಅಹಲ್ಯಾನಗರ: ಮಹಾರಾಷ್ಟ್ರದ ಅಹಲ್ಯಾನಗರ (ಹಿಂದಿನ ಅಹ್ಮದ್‌ನಗರ) ಪೊಲೀಸರು ಮತ್ತು ಮಿಲಿಟರಿ ಗುಪ್ತಚರ, ಸದರ್ನ್ ಕಮಾಂಡ್ ಜಂಟಿ ಕಾರ್ಯಾಚರಣೆಯಲ್ಲಿ ಒಂಬತ್ತು ಕಾಶ್ಮೀರಿಗಳನ್ನು ಬಂಧಿಸಲಾಗಿದ್ದು, ಒಂಬತ್ತು ರೈಫಲ್‌ಗಳು, 58 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಿಂದ ಬಂದಿರುವ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ನಗರಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ನಕಲಿ ಪರವಾನಗಿಗಳೊಂದಿಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ನಂತರ ತನಿಖೆ ಆರಂಭಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ, ಈ ಶಸ್ತ್ರಾಸ್ತ್ರ ಪರವಾನಗಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಜಮ್ಮು-ಕಾಶ್ಮೀರ ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಇವುಗಳು ಅಸಲಿ ಅಲ್ಲ ಎಂಬುದು ದೃಢಪಟ್ಟ ನಂತರ ದಾಳಿ ನಡೆಸಲಾಯಿತು ಎಂದು ಅವರು ಹೇಳಿದರು.

ದಾಳಿ ವೇಳೆ ಒಂಬತ್ತು 12-ಬೋರ್ ರೈಫಲ್‌ಗಳು ಮತ್ತು 58 ಬುಲೆಟ್‌ಗಳೊಂದಿಗೆ ಒಂಬತ್ತು ಜನರನ್ನು ಅಹಲ್ಯಾನಗರದಲ್ಲಿ ಬಂಧಿಸಲಾಗಿದೆ. ಬಂಧಿತರೆಲ್ಲರೂ ಜಮ್ಮುವಿನ ರಾಜೌರಿ ಮೂಲದವರು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT