ಕೈಲಾಶ್ ಗಹ್ಲೋಟ್  
ದೇಶ

AAP ಸಚಿವ ಸ್ಥಾನಕ್ಕೆ Kailash Gahlot ರಾಜೀನಾಮೆ: ನಾವೀಗ 'ಆಮ್ ಆದ್ಮಿ' ಆಗಿ ಉಳಿದಿಲ್ಲ.. ಪಕ್ಷಕ್ಕೆ ಬದ್ಧತೆ ಬದಲು ರಾಜಕೀಯ ಹಿತಾಸಕ್ತಿ ಮುಖ್ಯವಾಗಿದೆ!

ಕೈಲಾಶ್ ಗಹ್ಲೋಟ್ ಅವರು ಗೃಹ, ಸಾರಿಗೆ, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದಿಲ್ಲಿ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದರು.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಷ್ಟೇ ಬಾಕಿಯಿದ್ದು, ಈ ನಡುವಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯುಂಟಾಗಿದೆ. ಪಕ್ಷದ ಹಿರಿಯ ನಾಯಕ ಕೈಲಾಶ್ ಗಹ್ಲೋಟ್ ಅವರು ಪಕ್ಷ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೈಲಾಶ್ ಗೆಹ್ಲೋಟ್ ಅವರು ಗೃಹ, ಸಾರಿಗೆ, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದಿಲ್ಲಿ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದರು.

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ಕುರಿತು ಕೈಲಾಶ್ ಗಹ್ಲೋಟ್ ರಾಜೀನಾಮೆ ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ಪಕ್ಷದಲ್ಲಿನ ಗಂಭೀರ ಸವಾಲುಗಳನ್ನುಸೂಚಿಸಿದ್ದಾರೆ. ಇದಲ್ಲದೆ, ಎಎಪಿ ದೆಹಲಿ ಜನರಿಗೆ ನೀಡಿದ್ದ ಅನೇಕ ಭರವಸೆಗಳನ್ನು ಈಡೇರಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಉದಾಹರಣೆಗೆ ಯಮುನಾ ನದಿಯನ್ನು ತೆಗೆದುಕೊಳ್ಳಿ, ನಾವು ಯಮುನಾ ನದಿಯನ್ನು ಶುದ್ಧ ನದಿಯಾಗಿ ಮಾರ್ಪಾಡು ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು. ಆದರೆ, ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಈಗ ಯಮುನಾ ನದಿಯು ಮೊದಲಿಗಿಂತ ಹೆಚ್ಚು ಕಲುಷಿತವಾಗಿದೆ ಎಂದು ಬರೆದಿದ್ದಾರೆ.

ಎಎಪಿ ಜನರ ಹಕ್ಕುಗಳಿಗಾಗಿ ಹೋರಾಡುವ ಬದಲು ತನ್ನದೇ ಕಾರ್ಯಸೂಚಿಗಾಗಿ ಹೋರಾಡುವುದರಲ್ಲಿ ನಿರತವಾಗಿದೆ, ಇದು ದೆಹಲಿ ಜನರಿಗೆ ಮೂಲಭೂತ ಸೇವೆಗಳನ್ನು ಒದಗಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ. ಸರ್ಕಾರವು ತನ್ನ ಬಹುಪಾಲು ಸಮಯವನ್ನು ಕೇಂದ್ರದೊಂದಿಗೆ ಹೋರಾಡುತ್ತಿದ್ದರೆ, ನಿಜವಾದ ಪ್ರಗತಿ ಸಾಧ್ಯವಿಲ್ಲ ಎಂಬುದು ಈಗ ಸ್ಪಷ್ಟವಾಗುತ್ತಿದೆ.

ನಾನು ದೆಹಲಿಯ ಜನರಿಗೆ ಸೇವೆ ಸಲ್ಲಿಸುವ ಬದ್ಧತೆಯೊಂದಿಗೆ ನನ್ನ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದೇನೆ. ಅದನ್ನು ಮುಂದುವರಿಸಲು ಬಯಸುತ್ತೇನೆ. ಹೀಗಾಗಿಯೇ ಎಎಪಿಯಿಂದ ಹಿಂದೆ ಸರಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಆದ್ದರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆಮ್ ಆದ್ಮಿ ಪಕ್ಷವು ನಿಮ್ಮ ಆರೋಗ್ಯ ಮತ್ತು ಭವಿಷ್ಯಕ್ಕಾಗಿ ನಾನು ಶುಭ ಹಾರೈಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT