ಆ್ಯಂಬುಲೆನ್ಸ್ ದಾರಿ ಕೊಡದ ಕಾರು ಮಾಲೀಕ 
ದೇಶ

Video: ಆ್ಯಂಬುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬಿತ್ತು 2.5 ಲಕ್ಷ ರೂ ದಂಡ, ಲೈಸೆನ್ಸ್ ರದ್ದು!

ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ. ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ.

ತಿರುವನಂತಪುರಂ: ರಸ್ತೆಯಲ್ಲಿ ರೋಗಿ ಇದ್ದ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದು, ಬರೊಬ್ಬರಿ 2.5ಲಕ್ಷ ರೂ ದಂಡ ವಿಧಿಸಿದ್ದು ಮಾತ್ರವಲ್ಲದೇ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ.

ಹೌದು.. ಕೇರಳದ ತಿರುವನಂತಪುರದಲ್ಲಿ ಈ ಘಟನೆ ವರದಿಯಾಗಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ.

ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ. ಪದೇ ಪದೇ ಆ್ಯಂಬುಲೆನ್ಸ್ ಗೆ ಅಡ್ಡ ಬಂದು ರೋಗಿಯ ಜೀವವನ್ನು ಅಪಾಯಕ್ಕೆ ತಳ್ಳಿದ್ದಾನೆ.

ಇದರಿಂದ ಆಕ್ರೋಶಗೊಂಡ ಆ್ಯಂಬುಲೆನ್ಸ್ ಚಾಲಕ ಕಾರು ಮಾಲೀಕನ ದುರ್ವರ್ತನೆಯನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಚಾಲಕ ಎಷ್ಟೇ ಹಾರ್ನ್ ಮಾಡಿದರೂ ದಾರಿ ಬಿಟ್ಟು ಕೊಡದ ಕಾರು ಮಾಲೀಕ ರಸ್ತೆಯಲ್ಲಿ ಬೇಕೆಂದೇ ಅಡ್ಡ ಬಂದಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಚಾರ ತಿಳಿಯುತ್ತವೇ ಕೇರಳ ಟ್ರಾಫಿಕ್ ಪೊಲೀಸರು ವಿಡಿಯೋ ಮೂಲಕ ಕಾರಿನ ನಂಬರ್ ಮತ್ತು ಅದರ ಮಾಲೀಕನನ್ನು ಪತ್ತೆ ಮಾಡಿದ್ದಾರೆ.

ಅಲ್ಲದೆ ಆತನ ಮನೆಗೇ ಹೋಗಿ 2.5ಲಕ್ಷ ರೂ ದಂಡ ಹೇರಿದ್ದು, ಮಾತ್ರವಲ್ಲದೇ ಕಾರು ಚಾಲಕನ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಈ ಮೂಲಕ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಆಟವಾಡಿಸುವ ಕೆಲ ಪುಂಡರಿಗೆ ಈ ಘಟನೆ ಒಂದು ಪಾಠವಾದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT