ಆಸ್ಪತ್ರೆಯಲ್ಲಿ ಬೆಂಕಿ ಅವಘಡ ನಂತರದ ದೃಶ್ಯ  
ದೇಶ

ಝಾನ್ಸಿ ಆಸ್ಪತ್ರೆ ಬೆಂಕಿ ದುರಂತದಲ್ಲಿ ನವಜಾತ ಶಿಶುಗಳ ಸಾವು: ಉತ್ತರ ಪ್ರದೇಶ ಸರ್ಕಾರ, ಡಿಜಿಪಿಗೆ NHRC ನೊಟೀಸ್

ವರದಿಗಳ ವಿಷಯಗಳು ನಿಜಕ್ಕೂ ಗೊಂದಲವನ್ನುಂಟುಮಾಡುತ್ತವೆ ಮತ್ತು ನಿರ್ಲಕ್ಷ್ಯವನ್ನು ಸೂಚಿಸುತ್ತವೆ ಎಂದು ಆಯೋಗವು ಗಮನಿಸಿದೆ.

ನವದೆಹಲಿ: ಝಾನ್ಸಿಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 10 ನವಜಾತ ಶಿಶುಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ನೊಟೀಸ್ ಜಾರಿ ಮಾಡಿರುವುದಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ತಿಳಿಸಿದೆ.

ಘಟನೆಯ ವರದಿಗಳನ್ನು "ಗೊಂದಲಕಾರಿ" ಎಂದು ವ್ಯಾಖ್ಯಾನಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಒಂದು ವಾರದೊಳಗೆ ವಿವರವಾದ ವರದಿಯನ್ನು ಕೇಳಿದೆ. ವರದಿಗಳ ವಿಷಯಗಳು "ನಿಜಕ್ಕೂ ಗೊಂದಲವನ್ನುಂಟುಮಾಡುತ್ತವೆ ಮತ್ತು ನಿರ್ಲಕ್ಷ್ಯವನ್ನು ಸೂಚಿಸುತ್ತವೆ ಎಂದು ಆಯೋಗವು ಗಮನಿಸಿದೆ, ಶಿಶುಗಳು ಸರ್ಕಾರಿ ಸಂಸ್ಥೆಯ ಆರೈಕೆಯಲ್ಲಿದ್ದ ಕಾರಣ ಸಂತ್ರಸ್ತರ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ.

ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (NICU) ಮೊನ್ನೆ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 10 ನವಜಾತ ಶಿಶುಗಳು ಮೃತಪಟ್ಟಿವೆ ಎಂಬ ಮಾಧ್ಯಮ ವರದಿಯನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಲಾಗಿದೆ ಎಂದು ಎನ್‌ಎಚ್‌ಆರ್‌ಸಿ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯಲ್ಲಿ 16 ಶಿಶುಗಳಿಗೆ ಗಾಯಗಳಾಗಿದ್ದು, 37 ಮಕ್ಕಳನ್ನು ರಕ್ಷಿಸಲಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ರಾಣ ಕಳೆದುಕೊಂಡ ಶಿಶುಗಳು ಇನ್ಕ್ಯುಬೇಟರ್‌ಗಳಲ್ಲಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವಾರದೊಳಗೆ ವಿವರವಾದ ವರದಿಯನ್ನು ಕೋರಿ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಲಾಗಿದೆ ಎಂದು ಮಾನವ ಹಕ್ಕು ಆಯೋಗ ಹೇಳಿದೆ.

ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅಧಿಕಾರಿಗಳು ಕೈಗೊಂಡಿರುವ ಅಥವಾ ಪ್ರಸ್ತಾಪಿಸಿದ ಕ್ರಮಗಳ ಬಗ್ಗೆಯೂ ತಿಳಿಯಲು ಬಯಸುವುದಾಗಿ ಆಯೋಗ ಹೇಳಿದೆ. ಬೆಂಕಿ ಅವಘಡದ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ನಿನ್ನೆ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT