ಬ್ರೆಜಿಲ್ ನಲ್ಲಿ ಪ್ರಧಾನಿ ಮೋದಿ 
ದೇಶ

G20 Summit: ಬ್ರೆಜಿಲ್ ತಲುಪಿದ ಪ್ರಧಾನಿ ಮೋದಿ; ದಕ್ಷಿಣ ರಾಷ್ಟ್ರಗಳು ಎದುರಿಸುತ್ತಿರುವ ಗಂಭೀರ ವಿಷಯಗಳ ಕುರಿತು ವಿಶ್ವನಾಯಕರೊಂದಿಗೆ ಚರ್ಚೆ

ಮೋದಿಯವರು ಬ್ರೆಜಿಲ್ ತಲುಪುತ್ತಿದ್ದಂತೆಯೇ ಬ್ರೆಜಿಲ್‌ನಲ್ಲಿರುವ ಭಾರತೀಯ ರಾಯಭಾರಿ ಸುರೇಶ್ ರೆಡ್ಡಿ ನೇತೃತ್ವದ ಭಾರತೀಯ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ರಿಯೊ ಡಿ ಜನೈರೊ (ಬ್ರೆಜಿಲ್): ಆಫ್ರಿಕಾ ಖಂಡದ ನೈಜೀರಿಯಾ ಭೇಟಿ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಭೇಟಿ ನೀಡಿದ್ದಾರೆ.

ಮೋದಿಯವರು ಬ್ರೆಜಿಲ್ ತಲುಪುತ್ತಿದ್ದಂತೆಯೇ ಬ್ರೆಜಿಲ್‌ನಲ್ಲಿರುವ ಭಾರತೀಯ ರಾಯಭಾರಿ ಸುರೇಶ್ ರೆಡ್ಡಿ ನೇತೃತ್ವದ ಭಾರತೀಯ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಬ್ರೆಜಿಲ್ ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, "G20 ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಬಂದಿಳಿದಿದ್ದೇನೆ. ಶೃಂಗಸಭೆಯಲ್ಲಿ ಚರ್ಚೆಗಳು ಮತ್ತು ವಿವಿಧ ವಿಶ್ವ ನಾಯಕರೊಂದಿಗೆ ಫಲಪ್ರದ ಮಾತುಕತೆಗಳನ್ನು ಎದುರು ನೋಡುತ್ತಿದ್ದೇನೆಂದು ಹೇಳಿದ್ದಾರೆ.

ಅಲ್ಲದೆ, ವಿಮಾನ ನಿಲ್ದಾಣದಲ್ಲಿ ತಮ್ಮ ಸ್ವಾಗತದ ಫೋಟೋಗಳನ್ನು ಮೋದಿಯವರು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಅನಿವಾಸಿ ಭಾರತೀಯರು ಪ್ರಧಾನಿ ಮೋದಿಯವರನ್ನು ಸಂಭ್ರಮದಿಂದ ಸ್ವಾಗತಿಸುತ್ತಿರುವುದು, ಭಾರತದ ತ್ರಿವರ್ಣ ಧ್ವಜ ಹಾಗೂ ಪ್ರಧಾನಿ ಮೋದಿಯವರ ಫೋಟೋಗಳನ್ನು ಹಿಡಿದಿರುವುದು ಕಂಡು ಬಂದಿದೆ.

ರಿಯೊ ಡಿ ಜನೈರೊದಲ್ಲಿ ಜಿ20 ನಾಯಕರ ಶೃಂಗಸಭೆ ನಡೆಯಲಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರೂ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶೃಂಗಸಭೆಯಲ್ಲಿಹಲವು ಜಾಗತಿಕ ವಿಚಾರಗಳು, ವಿಶ್ವದ ದಕ್ಷಿಣ ರಾಷ್ಟ್ರಗಳು ಎದುರಿಸುತ್ತಿರುವ ಗಂಭೀರ ವಿಷಯಗಳ ಬಗ್ಗೆ ಮೋದಿ ಪ್ರಸ್ತಾಪ ಮಾಡಲಿದ್ದಾರೆ. ಶೃಂಗಸಭೆಯ ನೇಪಥ್ಯದಲ್ಲಿ ವಿಶ್ವದ ವಿವಿಧ ದೇಶಗಳ ಮುಖ್ಯಸ್ಥರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ ಅವರು, ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ನಂತರ ಮೋದಿ ಅವರು ನವೆಂಬರ್‌ 19ರಿಂದ 21ರ ವರೆಗೆ ಗಯಾನ ಪ್ರವಾಸದಲ್ಲಿರಲಿದ್ದಾರೆ. ಇದರೊಂದಿಗೆ ಭಾರತದ ಪ್ರಧಾನಿಯೊಬ್ಬರು ಗಯಾನಕ್ಕೆ 50 ವರ್ಷಗಳ ಬಳಿಕ ಭೇಟಿ ನೀಡಿದಂತಾಗಲಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT