ಸುಪ್ರೀಂ ಕೋರ್ಟ್ 
ದೇಶ

ದೆಹಲಿ ಮಾಲಿನ್ಯ: ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಸಿಜೆಐ ಸೂಚನೆ

"ಸಾಧ್ಯವಾದಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನಾವು ಎಲ್ಲಾ ನ್ಯಾಯಾಧೀಶರಿಗೆ ಹೇಳಿದ್ದೇವೆ" ಎಂದು ಸಿಜೆಐ ತಿಳಿಸಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯ ತೀವ್ರ ಅಪಾಯದ ಮಟ್ಟ ತಲುಪಿರುವುದನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಿರುವಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲಾ ನ್ಯಾಯಾಧೀಶರನ್ನು ಸೂಚಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮಂಗಳವಾರ ಹೇಳಿದ್ದಾರೆ.

ಸಿಜೆಐ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠ ಇಂದು ಸಭೆ ಸೇರಿದ ತಕ್ಷಣ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್​(ಎಸ್‌ಸಿಬಿಎ) ಅಧ್ಯಕ್ಷ ಕಪಿಲ್ ಸಿಬಲ್ ಸೇರಿದಂತೆ ವಕೀಲರು, ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಹದಗೆಡುತ್ತಿರುವ ಮಾಲಿನ್ಯವನ್ನು ಉಲ್ಲೇಖಿಸಿದರು ಮತ್ತು ಅದನ್ನು ಎದುರಿಸಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿದರು.

"ಸಾಧ್ಯವಾದಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನಾವು ಎಲ್ಲಾ ನ್ಯಾಯಾಧೀಶರಿಗೆ ಹೇಳಿದ್ದೇವೆ" ಎಂದು ಸಿಜೆಐ ತಿಳಿಸಿದರು.

ಮಾಲಿನ್ಯ ನಿಯಂತ್ರಣಕ್ಕೆ ಬರುತ್ತಿದೆ. ಇನ್ನೂ ಕಡಿಮೆಯಾಗಬೇಕಾಗಿದೆ. ಈ ಸಂದೇಶವು ಇತರ ನ್ಯಾಯಾಲಯಗಳಿಗೆ ಹೋಗಬೇಕು" ಎಂದು ಕಪಿಲ್ ಸಿಬಲ್ ಹೇಳಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಗೋಪಾಲ್ ಶಂಕರನಾರಾಯಣನ್ ಸೇರಿದಂತೆ ವಿವಿಧ ವಕೀಲರು ವರ್ಚುವಲ್ ವಿಚಾರಣೆಯನ್ನು ಬೆಂಬಲಿಸಿದರು. ಉನ್ನತ ನ್ಯಾಯಾಲಯವು ತಾತ್ವಿಕವಾಗಿ ವರ್ಚುವಲ್ ವಿಚಾರಣೆ ಹೋಗಬೇಕು ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಆತಂಕಕಾರಿ ಮಟ್ಟದಲ್ಲಿ ವಾಯು ಮಾಲಿನ್ಯ ಏರಿಕೆಯಾಗುತ್ತಿರುವುದನ್ನು ತಡೆಗಟ್ಟಲು ಕಟ್ಟುನಿಟ್ಟಾದ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವನ್ನು ಗಮನಿಸಿದ ಸುಪ್ರೀಂ ಕೋರ್ಟ್, GRAP 4 ನಿರ್ಬಂಧಗಳನ್ನು ಜಾರಿಗೊಳಿಸಲು ತಕ್ಷಣವೇ ತಂಡಗಳನ್ನು ರಚಿಸುವಂತೆ ದೆಹಲಿ-ಎನ್‌ಸಿಆರ್ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ