GSAT-N2 ಸಂವಹನ ಉಪಗ್ರಹ ಉಡಾವಣೆ 
ದೇಶ

ಇಸ್ರೋದ GSAT-N2 ಸಂವಹನ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಸ್ಪೇಸ್‌ಎಕ್ಸ್; Video

ಫಾಲ್ಕನ್ 9 ರಾಕೆಟ್‌ ನೆರವಿನಿಂದ 4,700 ಕೆಜಿ ತೂಕದ GSAT-N2 ಹೈ-ಥ್ರೂಪುಟ್(HTS) ಉಪಗ್ರಹವನ್ನು ನಿಗದಿತ ಜಿಯೋ-ಸಿಂಕ್ರೊನಸ್ ಟ್ರಾನ್ಸ್ ಫರ್ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಯಿತು.

ಬೆಂಗಳೂರು: ದೇಶದ ಇತ್ತೀಚಿನ ಸಂವಹನ ಉಪಗ್ರಹ ಜಿಸ್ಯಾಟ್-ಎನ್2 ಅನ್ನು ಬಿಲಿಯನೇರ್ ಎಲೋನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ಅಮೆರಿಕದ ಕೇಪ್ ಕೆನವೆರಲ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ ಎಂದು ಇಸ್ರೋದ ವಾಣಿಜ್ಯ ವಿಭಾಗ ಎನ್‌ಎಸ್‌ಐಎಲ್ ತಿಳಿಸಿದೆ.

ಫಾಲ್ಕನ್ 9 ರಾಕೆಟ್‌ ನೆರವಿನಿಂದ 4,700 ಕೆಜಿ ತೂಕದ GSAT-N2 ಹೈ-ಥ್ರೂಪುಟ್(HTS) ಉಪಗ್ರಹವನ್ನು ನಿಗದಿತ ಜಿಯೋ-ಸಿಂಕ್ರೊನಸ್ ಟ್ರಾನ್ಸ್ ಫರ್ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಯಿತು ಎಂದು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್(NSIL) ತಿಳಿಸಿದೆ.

GSAT-N2 ಹೈ-ಥ್ರೂಪುಟ್ (HTS) ಸಂವಹನ ಉಪಗ್ರಹವನ್ನು ನವೆಂಬರ್ 19, 2024 ರಂದು ಅಮೆರಿಕದ ಕೇಪ್ ಕ್ಯಾನವೆರಲ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. 4700 ಕೆಜಿ ತೂಕದ GSAT-N2 ಅನ್ನು ನಿಗದಿತ ಜಿಯೋ-ಸಿಂಕ್ರೊನಸ್ ಟ್ರಾನ್ಸ್‌ಫರ್ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಯಿತು. ಉಪಗ್ರಹ ಉತ್ತಮ ಸ್ಥಿತಿಯಲ್ಲಿದ್ದು, ಇಸ್ರೋದ ಮಾಸ್ಟರ್ ಕಂಟ್ರೋಲ್ ಫೆಸಿಲಿಟಿ(ಎಂಸಿಎಫ್) ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಪ್ರಾಥಮಿಕ ಮಾಹಿತಿಯು ಸೂಚಿಸುತ್ತದೆ" ಎಂದು NSIL 'X' ನಲ್ಲಿ ಪೋಸ್ಟ್‌ ಮಾಡಿದೆ.

"ಜಿಎಸ್‌ಎಟಿ-ಎನ್2 ಬ್ಯಾಂಡ್ ಹೈ ಥ್ರೋಪುಟ್ ಸಂವಹನ ಉಪಗ್ರಹವಾಗಿದ್ದು, ದೇಶದ ಬ್ರಾಡ್‌ಬ್ಯಾಂಡ್ ಸೇವೆಗಳು ಮತ್ತು ವಿಮಾನದಲ್ಲಿ ಕನೆಕ್ಟಿವಿಟಿ ಹೆಚ್ಚಿಸುತ್ತದೆ" ಎಂದು ಎನ್‌ಎಸ್‌ಐಎಲ್ ಹೇಳಿದೆ.

ಈ ಉಪಗ್ರಹವು 14 ವರ್ಷ ಕಾರ್ಯಾಚರಣೆಯ ಅವಧಿಯನ್ನು ಹೊಂದಿದೆ ಮತ್ತು 32 ಬಳಕೆದಾರ ಕಿರಣಗಳನ್ನು ಹೊಂದಿದ್ದು, ಈಶಾನ್ಯ ಪ್ರದೇಶದಲ್ಲಿ ಎಂಟು ಕಿರಿದಾದ ಸ್ಪಾಟ್ ಕಿರಣಗಳು ಮತ್ತು ಭಾರತದ ಉಳಿದ ಭಾಗಗಳಲ್ಲಿ 24 ವಿಶಾಲ ಸ್ಪಾಟ್ ಕಿರಣಗಳನ್ನು ಒಳಗೊಂಡಿದೆ.

4,700 ಕೆ.ಜಿ ತೂಗುವ ಜಿಸ್ಯಾಟ್-2 ಉಪಗ್ರಹವು ಭಾರತದ ಸ್ವಂತ ರಾಕೆಟ್‌ಗಳ ಹೊತ್ತೊಯ್ಯುವ ಸಾಮರ್ಥ್ಯವನ್ನು ಮೀರಿದೆ. ಹೀಗಾಗಿ ಇಸ್ರೋ ಅದರ ಉಡಾವಣೆಗಾಗಿ ಸ್ಪೇಸ್‌ ಎಕ್ಸ್‌ನ್ನು ಆಯ್ಕೆ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!