ದೆಹಲಿ ವಾಯು ಮಾಲಿನ್ಯ 
ದೇಶ

ದೆಹಲಿ: ಶೇ.50 ರಷ್ಟು ಸರ್ಕಾರಿ ಸಿಬ್ಬಂದಿ ಮನೆಯಿಂದ ಕೆಲಸ; ಇದನ್ನು ಅನುಸರಿಸುವಂತೆ ಖಾಸಗಿ ಕಚೇರಿಗಳಿಗೂ ಸೂಚನೆ

"ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವ ನಿರ್ಧರ ತೆಗೆದುಕೊಂಡಿದೆ.

ನವದೆಹಲಿ: ತೀವ್ರ ವಾಯುಮಾಲಿನ್ಯದಿಂದಾಗಿ ರಾಷ್ಟ್ರ ರಾಜಧಾನಿ ಉಸಿರುಗಟ್ಟಿಸುವುದನ್ನು ತಡೆಯಲು ದೆಹಲಿ ಸರ್ಕಾರ ಬುಧವಾರ ಬೆಳಗ್ಗೆ ತನ್ನ ಶೇ. 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ(WFH) ಮಾಡುವಂತೆ ಸೂಚಿಸಿದೆ.

ಪರಿಸರ ಸಚಿವ ಗೋಪಾಲ್ ರೈ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುಲ ನಿರ್ಧರ ತೆಗೆದುಕೊಂಡಿದೆ. ಶೇ 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ. ಅದರ ಅನುಷ್ಠಾನಕ್ಕಾಗಿ ಅಧಿಕಾರಿಗಳು ಇಂದು ಸಚಿವಾಲಯದಲ್ಲಿ ಸಭೆ ನಡೆಸಿದರು ಎಂದು ತಿಳಿಸಿದ್ದಾರೆ.

ಮನೆಯಿಂದ ಕೆಲಸ ಮತ್ತು ಸಮ-ಬೆಸ ನಿಯಮವನ್ನು ಸರ್ಕಾರ ಶೀಘ್ರದಲ್ಲೇ ನಿರ್ಧರಿಸುತ್ತದೆ ಎಂದು ಗೋಪಾಲ್ ರೈ ಹೇಳಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.

ಖಾಸಗಿ ವಲಯದ ಕಚೇರಿಗಳು ಅರ್ಧದಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವಂತೆ ಸಚಿವರು ಸಲಹೆ ನೀಡಿದ್ದಾರೆ. "ದೆಹಲಿಯಲ್ಲಿರುವ ಖಾಸಗಿ ಕಚೇರಿಗಳು ತಮ್ಮ ಶೇಕಡಾ 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಬೇಕು. ಅದಕ್ಕೆ ಸಂಬಂಧಿಸಿದ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ದೆಹಲಿ ಸಚಿವಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ರೈ ತಿಳಿಸಿದ್ದಾರೆ.

ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಖಾಸಗಿ ಸಂಸ್ಥೆಗಳು ಕಚೇರಿ ಸಮಯವನ್ನು 10:30 ರ ಬದಲು 11:00 ರಿಂದ ಆರಂಭಿಸಲು ಪರಿಗಣಿಸುವಂತೆ ರೈ ಸಲಹೆ ನೀಡಿದ್ದಾರೆ.

ಆದಾಗ್ಯೂ, ಆರೋಗ್ಯ ರಕ್ಷಣೆ, ನೈರ್ಮಲ್ಯ, ಸಾರ್ವಜನಿಕ ಸಾರಿಗೆ, ಅಗ್ನಿಶಾಮಕ ಸೇವೆಗಳು, ಕಾನೂನು ಜಾರಿ, ವಿದ್ಯುತ್ ಸರಬರಾಜು, ನೀರು ಚಿಕಿತ್ಸೆ ಮತ್ತು ತುರ್ತು ಪ್ರತಿಕ್ರಿಯೆ ಕಾರ್ಯಾಚರಣೆಗಳಂತಹ ಅಗತ್ಯ ಸೇವೆಗಳಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT