ದೆಹಲಿ ವಾಯು ಮಾಲಿನ್ಯ 
ದೇಶ

ದೆಹಲಿ: ಶೇ.50 ರಷ್ಟು ಸರ್ಕಾರಿ ಸಿಬ್ಬಂದಿ ಮನೆಯಿಂದ ಕೆಲಸ; ಇದನ್ನು ಅನುಸರಿಸುವಂತೆ ಖಾಸಗಿ ಕಚೇರಿಗಳಿಗೂ ಸೂಚನೆ

"ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವ ನಿರ್ಧರ ತೆಗೆದುಕೊಂಡಿದೆ.

ನವದೆಹಲಿ: ತೀವ್ರ ವಾಯುಮಾಲಿನ್ಯದಿಂದಾಗಿ ರಾಷ್ಟ್ರ ರಾಜಧಾನಿ ಉಸಿರುಗಟ್ಟಿಸುವುದನ್ನು ತಡೆಯಲು ದೆಹಲಿ ಸರ್ಕಾರ ಬುಧವಾರ ಬೆಳಗ್ಗೆ ತನ್ನ ಶೇ. 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ(WFH) ಮಾಡುವಂತೆ ಸೂಚಿಸಿದೆ.

ಪರಿಸರ ಸಚಿವ ಗೋಪಾಲ್ ರೈ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುಲ ನಿರ್ಧರ ತೆಗೆದುಕೊಂಡಿದೆ. ಶೇ 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ. ಅದರ ಅನುಷ್ಠಾನಕ್ಕಾಗಿ ಅಧಿಕಾರಿಗಳು ಇಂದು ಸಚಿವಾಲಯದಲ್ಲಿ ಸಭೆ ನಡೆಸಿದರು ಎಂದು ತಿಳಿಸಿದ್ದಾರೆ.

ಮನೆಯಿಂದ ಕೆಲಸ ಮತ್ತು ಸಮ-ಬೆಸ ನಿಯಮವನ್ನು ಸರ್ಕಾರ ಶೀಘ್ರದಲ್ಲೇ ನಿರ್ಧರಿಸುತ್ತದೆ ಎಂದು ಗೋಪಾಲ್ ರೈ ಹೇಳಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.

ಖಾಸಗಿ ವಲಯದ ಕಚೇರಿಗಳು ಅರ್ಧದಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವಂತೆ ಸಚಿವರು ಸಲಹೆ ನೀಡಿದ್ದಾರೆ. "ದೆಹಲಿಯಲ್ಲಿರುವ ಖಾಸಗಿ ಕಚೇರಿಗಳು ತಮ್ಮ ಶೇಕಡಾ 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಬೇಕು. ಅದಕ್ಕೆ ಸಂಬಂಧಿಸಿದ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ದೆಹಲಿ ಸಚಿವಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ರೈ ತಿಳಿಸಿದ್ದಾರೆ.

ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಖಾಸಗಿ ಸಂಸ್ಥೆಗಳು ಕಚೇರಿ ಸಮಯವನ್ನು 10:30 ರ ಬದಲು 11:00 ರಿಂದ ಆರಂಭಿಸಲು ಪರಿಗಣಿಸುವಂತೆ ರೈ ಸಲಹೆ ನೀಡಿದ್ದಾರೆ.

ಆದಾಗ್ಯೂ, ಆರೋಗ್ಯ ರಕ್ಷಣೆ, ನೈರ್ಮಲ್ಯ, ಸಾರ್ವಜನಿಕ ಸಾರಿಗೆ, ಅಗ್ನಿಶಾಮಕ ಸೇವೆಗಳು, ಕಾನೂನು ಜಾರಿ, ವಿದ್ಯುತ್ ಸರಬರಾಜು, ನೀರು ಚಿಕಿತ್ಸೆ ಮತ್ತು ತುರ್ತು ಪ್ರತಿಕ್ರಿಯೆ ಕಾರ್ಯಾಚರಣೆಗಳಂತಹ ಅಗತ್ಯ ಸೇವೆಗಳಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT