ದೆಹಲಿ ವಾಯು ಮಾಲಿನ್ಯ 
ದೇಶ

ದೆಹಲಿ: ಶೇ.50 ರಷ್ಟು ಸರ್ಕಾರಿ ಸಿಬ್ಬಂದಿ ಮನೆಯಿಂದ ಕೆಲಸ; ಇದನ್ನು ಅನುಸರಿಸುವಂತೆ ಖಾಸಗಿ ಕಚೇರಿಗಳಿಗೂ ಸೂಚನೆ

"ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವ ನಿರ್ಧರ ತೆಗೆದುಕೊಂಡಿದೆ.

ನವದೆಹಲಿ: ತೀವ್ರ ವಾಯುಮಾಲಿನ್ಯದಿಂದಾಗಿ ರಾಷ್ಟ್ರ ರಾಜಧಾನಿ ಉಸಿರುಗಟ್ಟಿಸುವುದನ್ನು ತಡೆಯಲು ದೆಹಲಿ ಸರ್ಕಾರ ಬುಧವಾರ ಬೆಳಗ್ಗೆ ತನ್ನ ಶೇ. 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದ ಕೆಲಸ(WFH) ಮಾಡುವಂತೆ ಸೂಚಿಸಿದೆ.

ಪರಿಸರ ಸಚಿವ ಗೋಪಾಲ್ ರೈ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುಲ ನಿರ್ಧರ ತೆಗೆದುಕೊಂಡಿದೆ. ಶೇ 50 ರಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ. ಅದರ ಅನುಷ್ಠಾನಕ್ಕಾಗಿ ಅಧಿಕಾರಿಗಳು ಇಂದು ಸಚಿವಾಲಯದಲ್ಲಿ ಸಭೆ ನಡೆಸಿದರು ಎಂದು ತಿಳಿಸಿದ್ದಾರೆ.

ಮನೆಯಿಂದ ಕೆಲಸ ಮತ್ತು ಸಮ-ಬೆಸ ನಿಯಮವನ್ನು ಸರ್ಕಾರ ಶೀಘ್ರದಲ್ಲೇ ನಿರ್ಧರಿಸುತ್ತದೆ ಎಂದು ಗೋಪಾಲ್ ರೈ ಹೇಳಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.

ಖಾಸಗಿ ವಲಯದ ಕಚೇರಿಗಳು ಅರ್ಧದಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವಂತೆ ಸಚಿವರು ಸಲಹೆ ನೀಡಿದ್ದಾರೆ. "ದೆಹಲಿಯಲ್ಲಿರುವ ಖಾಸಗಿ ಕಚೇರಿಗಳು ತಮ್ಮ ಶೇಕಡಾ 50 ರಷ್ಟು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಬೇಕು. ಅದಕ್ಕೆ ಸಂಬಂಧಿಸಿದ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ದೆಹಲಿ ಸಚಿವಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ರೈ ತಿಳಿಸಿದ್ದಾರೆ.

ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಖಾಸಗಿ ಸಂಸ್ಥೆಗಳು ಕಚೇರಿ ಸಮಯವನ್ನು 10:30 ರ ಬದಲು 11:00 ರಿಂದ ಆರಂಭಿಸಲು ಪರಿಗಣಿಸುವಂತೆ ರೈ ಸಲಹೆ ನೀಡಿದ್ದಾರೆ.

ಆದಾಗ್ಯೂ, ಆರೋಗ್ಯ ರಕ್ಷಣೆ, ನೈರ್ಮಲ್ಯ, ಸಾರ್ವಜನಿಕ ಸಾರಿಗೆ, ಅಗ್ನಿಶಾಮಕ ಸೇವೆಗಳು, ಕಾನೂನು ಜಾರಿ, ವಿದ್ಯುತ್ ಸರಬರಾಜು, ನೀರು ಚಿಕಿತ್ಸೆ ಮತ್ತು ತುರ್ತು ಪ್ರತಿಕ್ರಿಯೆ ಕಾರ್ಯಾಚರಣೆಗಳಂತಹ ಅಗತ್ಯ ಸೇವೆಗಳಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT