ಸಾಂದರ್ಭಿಕ ಚಿತ್ರ  
ದೇಶ

4 ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ: ಮತದಾನ ಪ್ರಗತಿಯಲ್ಲಿ

ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಜೊತೆಗೆ 4 ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಇಂದು ಬುಧವಾರ ಉಪಚುನಾವಣೆ ನಡೆಯುತ್ತಿದೆ.

ಉತ್ತರ ಪ್ರದೇಶ, ಪಂಜಾಬ್, ಕೇರಳ ಮತ್ತು ಉತ್ತರಾಖಂಡದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ಕತೇಹಾರಿ, ಕರ್ಹಾಲ್, ಮೀರಾಪುರ್, ಘಾಜಿಯಾಬಾದ್, ಮಜವಾನ್, ಸಿಸಾಮೌ, ಖೈರ್, ಫುಲ್ಪುರ್ ಮತ್ತು ಕುಂದರ್ಕಿಯಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಲೋಕಸಭೆ ಚುನಾವಣೆ ನಂತರ ರಾಜಕೀಯವಾಗಿ-ನಿರ್ಣಾಯಕ ರಾಜ್ಯದಲ್ಲಿ ಇದು ಇಂಡಿಯಾ ಬ್ಲಾಕ್ ಮತ್ತು ಎನ್‌ಡಿಎ ಮೈತ್ರಿಕೂಟಗಳಿಗೆ ಮೊದಲ ಚುನಾವಣಾ ಪರೀಕ್ಷೆಯಾಗಿದೆ.

ಪಂಜಾಬ್‌ನ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಗಿಡ್ಡರ್‌ಬಾಹಾ, ಡೇರಾ ಬಾಬಾ ನಾನಕ್, ಚಬ್ಬೇವಾಲ್ (ಎಸ್‌ಸಿ) ಮತ್ತು ಬರ್ನಾಲಾಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಇಲ್ಲಿ ಪ್ರತಿನಿಧಿಸುತ್ತಿದ್ದ ಶಾಸಕರು ಲೋಕಸಭೆಗೆ ಆಯ್ಕೆಯಾದ ನಂತರ ಉಪಚುನಾವಣೆ ಅನಿವಾರ್ಯವಾಯಿತು.

ಬಿಜೆಪಿ ಅಭ್ಯರ್ಥಿ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಕಾಂಗ್ರೆಸ್‌ನ ಅಮೃತಾ ವಾರಿಂಗ್, ಜತೀಂದರ್ ಕೌರ್, ಎಎಪಿಯ ಹರ್ದೀಪ್ ಸಿಂಗ್ ಡಿಂಪಿ ಧಿಲ್ಲೋನ್, ಡಾ ಇಶಾಂಕ್ ಕುಮಾರ್ ಚಬ್ಬೇವಾಲ್ ಮತ್ತು ಬಿಜೆಪಿಯ ಕೇವಲ್ ಸಿಂಗ್ ಧಿಲ್ಲೋನ್, ಸೋಹನ್ ಸಿಂಗ್ ಥಂಡಾಲ್ ಮತ್ತು ರವಿಕರನ್ ಸಿಂಗ್ ಕಹ್ಲೋನ್ ಸೇರಿದಂತೆ ಪ್ರಮುಖ ಸ್ಪರ್ಧಿಗಳ ಭವಿಷ್ಯವನ್ನು ಉಪಚುನಾವಣೆ ನಿರ್ಧರಿಸುತ್ತದೆ.

ಕೇರಳದ ಪಾಲಕ್ಕಾಡ್ ಮತ್ತು ಉತ್ತರಾಖಂಡದ ಕೇದಾರನಾಥ ಕ್ಷೇತ್ರಕ್ಕೂ ಮತದಾನ ನಡೆಯುತ್ತಿದೆ. ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಫಿ ಪರಂಬಿಲ್ ಅವರು ವಡಕರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ನಂತರ ಪಾಲಕ್ಕಾಡ್‌ನಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು.

ಜುಲೈನಲ್ಲಿ ಹಾಲಿ ಬಿಜೆಪಿ ಶಾಸಕಿ ಶೈಲಾರಾಣಿ ರಾವತ್ ನಿಧನದ ನಂತರ ಕೇದಾರನಾಥ ಕ್ಷೇತ್ರ ತೆರವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT