ಸುಪ್ರಿಯಾ ಸುಳೆ 
ದೇಶ

Maharashtra Elections: Crypto funds ಡೀಲ್ ಆರೋಪ ಅಲ್ಲಗಳೆದ Supriya Sule; BJP ವಿರುದ್ಧ ಮಾನನಷ್ಟ ಮೊಕದ್ದಮೆ!

ಇದೊಂದು ರಾಜಕೀಯ ಪಿತೂರಿ. ನಕಲಿ ಧ್ವನಿಯನ್ನು ಸೃಷ್ಟಿಸಲಾಗಿದೆ, ಅಪರಾಧಿ ಯಾರೆಂದು ಪೊಲೀಸರು ಪತ್ತೆ ಮಾಡುತ್ತಾರೆ. ಇದು ನನ್ನ ಧ್ವನಿಯೂ ಅಲ್ಲ ಅಥವಾ ನಾನಾ ಪಟೋಲೆ ಅವರ ಧ್ವನಿಯೂ ಅಲ್ಲ...

ಮುಂಬೈ: ಮಹಾರಾಷ್ಚ್ರ ವಿಧಾನಸಭೆ ಚುನಾವಣೆ ನಡುವೆಯೇ ತಮ್ಮ ವಿರುದ್ಧ ಕೇಳಿಬಂದಿರುವ Crypto funds ಡೀಲ್ ಆರೋಪವನ್ನು ಎನ್ ಸಿಪಿ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾಸುಳೆ ತಳ್ಳಿಹಾಕಿದ್ದು, ಈ ಕುರಿತು BJP ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಮಾಜಿ ಪೊಲೀಸ್ ಕಮಿಷನರ್ ಮತ್ತು ಡೀಲರ್‌ನೊಂದಿಗೆ ಅಕ್ರಮ ವಹಿವಾಟು ನಡೆಸಲು ಪಿತೂರಿ ನಡೆಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (MVA) ಪರವಾಗಿ ಚುನಾವಣಾ ಫಲಿತಾಂಶವನ್ನು ತಿರುಗಿಸಲು ಸಂಚು ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಆರೋಪಿಸಿದ್ದರು.

ಈ ಆರೋಪದ ವಿಚಾರ ಇದೀಗ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿ ಮಾಡಿದ್ದು, ಇದಕ್ಕೆ ಇಂಬು ನೀಡುವಂತೆ ಆಡಿಯೋ ಕ್ಲಿಪ್ ಅನ್ನೂ ಕೂಡ ಬಿಜೆಪಿ ಬಿಡುಗಡೆ ಮಾಡಿದೆ.

ಈ ವಿಚಾರ ವೈರಲ್ ಆಗುತ್ತಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಪ್ರಿಯಾ ಸುಳೆ, 'ಇದೊಂದು ರಾಜಕೀಯ ಪಿತೂರಿ. ನಕಲಿ ಧ್ವನಿಯನ್ನು ಸೃಷ್ಟಿಸಲಾಗಿದೆ, ಅಪರಾಧಿ ಯಾರೆಂದು ಪೊಲೀಸರು ಪತ್ತೆ ಮಾಡುತ್ತಾರೆ. ಇದು ನನ್ನ ಧ್ವನಿಯೂ ಅಲ್ಲ ಅಥವಾ ನಾನಾ ಪಟೋಲೆ ಅವರ ಧ್ವನಿಯೂ ಅಲ್ಲ.ನಾನು ಬಿಟ್‌ಕಾಯಿನ್ ಮತ್ತು ಕ್ರಿಪ್ಟೋ ಕರೆನ್ಸಿ ವಿರುದ್ಧ ಮಾತನಾಡಿದ್ದೇನೆ.

ನಾನು ಅದರ ಬಗ್ಗೆ ತುಂಬಾ ಗಂಭೀರವಾದ ವಿಷಯಗಳನ್ನು ಎತ್ತಿರುವ ವ್ಯಕ್ತಿ. ಬಿಜೆಪಿಯವರಿಗೆ ಉತ್ತರಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಸಂಪೂರ್ಣ ಪಾರದರ್ಶಕತೆಯ ವ್ಯಕ್ತಿಯಾಗಿರುವುದರಿಂದ ಬಿಜೆಪಿಯ ಯಾವುದೇ ಪ್ರಶ್ನೆಗೆ ಉತ್ತರಿಸಲು ನನಗೆ ತುಂಬಾ ಸಂತೋಷ ಎಂದು ಹೇಳಿದ್ದಾರೆ.

ಅಂತೆಯೇ ಪುರಾವೆಗಳಿಲ್ಲದೆ ಆರೋಪಗಳನ್ನು ಆಧರಿಸಿ ತನ್ನನ್ನು ಬಂಧಿಸದಿರುವ ಮಹಾರಾಷ್ಟ್ರ ಪೊಲೀಸರ ಮೇಲೆ ನನಗೆ ನಂಬಿಕೆ ಇದೆ. ಚುನಾವಣೆಯ ಹಿಂದಿನ ದಿವಸ ಪ್ರಾಮಾಣಿಕ ಮತದಾರರ ದಿಕ್ಕು ತಪ್ಪಿಸಲು ಸುಳ್ಳು ಮಾಹಿತಿಗಳನ್ನು ಹರಡುವುದು ಎಲ್ಲರಿಗೂ ಚೆನ್ನಾಗಿ ತಿಳಿದಿರುವ ತಂತ್ರ ಎಂದು ತಿರುಗೇಟು ನೀಡಿದ್ದಾರೆ.

ಸುಧಾಂಶು ತ್ರಿವೇದಿ ಅವರ 5 ಪ್ರಶ್ನೆಗಳಿಗೆ ಎಲ್ಲಿ ಬೇಕಾದರೂ ಉತ್ತರಿಸಲು ನಾನು ಸಿದ್ಧನಿದ್ದೇನೆ. ಅವರು ಹೇಳಿದ ಸಮಯ, ಸ್ಥಳ ಮತ್ತು ಅವರು ಹೇಳಿದ ವೇದಿಕೆಯಲ್ಲಿ ನಾನು ಅವರಿಗೆ ಉತ್ತರಿಸಲು ಸಿದ್ಧನಿದ್ದೇನೆ ಏಕೆಂದರೆ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ ಎಂದು ಹೇಳಿದ್ದಾರೆ.

BJP ವಿರುದ್ಧ ಮಾನನಷ್ಟ ಮೊಕದ್ದಮೆ

ಇದೇ ವೇಳೆ ತಮ್ಮ ವಿರುದ್ಧ ಇಲ್ಲದ ಸಲ್ಲದ ಆರೋಪ ಮಾಡಿ ತಮ್ಮ ತೇಜೋವಧೆಗೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಸುಪ್ರಿಯಾ ಸುಳೆ, ಈ ಸಂಬಂಧ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಬಿಜೆಪಿ ಸುಧಾಂಶು ತ್ರಿವೇದಿಗೆ ಮಾನನಷ್ಟ ನೋಟಿಸ್ ಕಳುಹಿಸಿರುವುದನ್ನು ಸುಳೆ ಅವರು ಖಚಿತಪಡಿಸಿದ್ದು, ಸುಧಾಂಶು ತ್ರಿವೇದಿಗೆ ಅವರು ಯಾವ ನಗರದಲ್ಲಿ ಬೇಕಾದರೂ, ಅವರು ಬಯಸಿದ ಚಾನಲ್‌ನಲ್ಲಿ, ಅವರು ಬಯಸಿದ ಸಮಯದಲ್ಲಿ, ಅವರು ನನ್ನನ್ನು ಎಲ್ಲಿಗೆ ಕರೆದರೂ ನಾನು ಬರುತ್ತೇನೆ ಮತ್ತು ಉತ್ತರಿಸುತ್ತೇನೆ. ನಾನು ಉತ್ತರಿಸಲು ನಾನು ಸಿದ್ಧನಿದ್ದೇನೆ, ಎಲ್ಲಾ ಆರೋಪಗಳು ಸುಳ್ಳು. ನನಗೆ ಈ ಬಗ್ಗೆ ಏನೂ ತಿಳಿದಿಲ್ಲ ಮತ್ತು ಅದಕ್ಕಾಗಿಯೇ ನಾನು ಮೊದಲು ಸೈಬರ್ ಕ್ರೈಮ್‌ಗೆ ದೂರು ನೀಡಿದ್ದೇನೆ ಮತ್ತು ನಾನು ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT