ಪೊಲೀಸ್ ಅಧಿಕಾರಿಗಳು  online desk
ದೇಶ

UP bypolls 2024: ಪೊಲೀಸ್ ಅಧಿಕಾರಿಗಳಿಂದಲೇ ನೀತಿ ಸಂಹಿತೆ ಉಲ್ಲಂಘನೆ; 7 ಆಧಿಕಾರಿಗಳು ಅಮಾನತು!

ಮತದಾರರ ನಿಗ್ರಹ ಮತ್ತು ಮತದಾನ ಕೇಂದ್ರಗಳಲ್ಲಿನ ಅಕ್ರಮಗಳ ಬಗ್ಗೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪ ಮಾಡಿದ್ದವು.

ಲಖನೌ: ಉತ್ತರ ಪ್ರದೇಶ ಉಪಚುನಾವಣೆ ವೇಳೆ ಮತದಾರರ ಗುರುತಿನ ಚೀಟಿ ಪರಿಶೀಲನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಚುನಾವಣಾ ಆಯೋಗ (EC) ಬುಧವಾರ ಆದೇಶಿಸಿದೆ.

ಮತದಾರರ ನಿಗ್ರಹ ಮತ್ತು ಮತದಾನ ಕೇಂದ್ರಗಳಲ್ಲಿನ ಅಕ್ರಮಗಳ ಬಗ್ಗೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಆಯೋಗ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಆದೇಶಿಸಿದೆ.

ಮುಜಾಫರ್‌ನಗರದಂತಹ ಪ್ರದೇಶಗಳಲ್ಲಿ ಮತದಾರರು ಮತದಾನ ಮಾಡದಂತೆ ಪೊಲೀಸ್ ಸಿಬ್ಬಂದಿ ತಡೆಯುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷ ಆರೋಪಿಸಿದೆ.

ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್, ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು. ವೀಡಿಯೊ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮತದಾರರ ನಿಗ್ರಹಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಕರೆ ನೀಡಿದ್ದಾರೆ. ಯಾದವ್ ತಮ್ಮ ಪೋಸ್ಟ್‌ನಲ್ಲಿ, "ಮತದಾರರ ಕಾರ್ಡ್ ಮತ್ತು ಆಧಾರ್ ಐಡಿಗಳನ್ನು ಪರಿಶೀಲಿಸುತ್ತಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ವೀಡಿಯೊ ಸಾಕ್ಷ್ಯದ ಆಧಾರದ ಮೇಲೆ ತಕ್ಷಣವೇ ಅಮಾನತುಗೊಳಿಸಬೇಕು" ಎಂದು ಒತ್ತಾಯಿಸಿದ್ದಾರೆ. ಆಧಾರ್ ಅಥವಾ ಗುರುತಿನ ಚೀಟಿಗಳನ್ನು ಪರಿಶೀಲಿಸಲು ಪೊಲೀಸರಿಗೆ ಯಾವುದೇ ಹಕ್ಕಿಲ್ಲ ಎಂದು ಅವರು ಒತ್ತಿ ಹೇಳಿದರು, ಮತಗಟ್ಟೆ ಅಧಿಕಾರಿಗಳಿಗೆ ಮಾತ್ರ ಹಾಗೆ ಮಾಡಲು ಅನುಮತಿ ಇದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT