ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ 
ದೇಶ

ಅಸ್ಸಾಂನ ಕರೀಂಗಂಜ್ ಹೆಸರು ಬದಲಾವಣೆ; ಶ್ರೀಭೂಮಿ ಎಂದು ಮರುನಾಮಕರಣ

ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ.

ಕರೀಂಗಂಜ್: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ.

ಅಸ್ಸಾಂ ರಾಜ್ಯಪಾಲರ ಆದೇಶದಂತೆ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಜಿಲ್ಲೆ ಮತ್ತು ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಿ ಸಾಮಾನ್ಯ ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಖೇಶ್ ಚಂದ್ರ ಸಾಹು ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅವರು ತಿಳಿಸಿದ್ದಾರೆ.

ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲು ಅಸ್ಸಾಂ ಕ್ಯಾಬಿನೆಟ್ ಮಂಗಳವಾರ ಒಪ್ಪಿಗೆ ನೀಡಿತ್ತು.

"100 ವರ್ಷಗಳ ಹಿಂದೆ, ಕಬಿಗುರು ರವೀಂದ್ರನಾಥ ಠಾಗೋರ್ ಅವರು ಅಸ್ಸಾಂನ ಆಧುನಿಕ ಕರೀಂಗಂಜ್ ಜಿಲ್ಲೆಯನ್ನು ಶ್ರೀಭೂಮಿ - ಮಾ ಲಕ್ಷ್ಮಿಯ ನಾಡು ಎಂದು ಬಣ್ಣಿಸಿದ್ದರು. ಇಂದು, ಅಸ್ಸಾಂ ಕ್ಯಾಬಿನೆಟ್ ನಮ್ಮ ಜನರ ಈ ಬಹುಕಾಲದ ಬೇಡಿಕೆಯನ್ನು ಈಡೇರಿಸಿದೆ" ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಪುಟ ಸಭೆಯ ನಂತರ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT