ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ 
ದೇಶ

'Adani ಯನ್ನು ತಕ್ಷಣವೇ ಬಂಧಿಸಿ, ಸೆಬಿ ಮುಖ್ಯಸ್ಥೆಯ ವಿರುದ್ಧವೂ ತನಿಖೆ ನಡೆಸಿ': ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿದ್ದು, ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.

ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಕೇಂದ್ರಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿದ್ದು, ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.

ಭಾರತೀಯ ಅಧಿಕಾರಿಗಳಿಗೆ USD 250 ಮಿಲಿಯನ್ ಲಂಚ ನೀಡಿದ ಆರೋಪದ ಮೇಲೆ US ಪ್ರಾಸಿಕ್ಯೂಟರ್‌ಗಳು ಅದಾನಿ ಮತ್ತು ಸಹಚರರ ಮೇಲೆ ಆರೋಪ ಹೊರಿಸಿ ಬಂಧನ ವಾರಂಟ್ ಜಾರಿಸಿಗೊಳಿಸಿದ ಬೆನ್ನಲ್ಲೇ ಅದಾನಿ ಬಂಧನಕ್ಕೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 'ಉದ್ಯಮಿ ಗೌತಮ್ ಅದಾನಿ ಭಾರತೀಯ ಮತ್ತು ಅಮೇರಿಕನ್ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಈಗ ಅಮೆರಿಕದಲ್ಲಿ ಸ್ಪಷ್ಟವಾಗಿದೆ ಮತ್ತು ದೃಢಪಟ್ಟಿದೆ ಎಂದು ಹೇಳಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್ ಹೇ’ ಘೋಷಣೆಗೆ ವ್ಯಂಗ್ಯವಾಡಿದ ರಾಹುಲ್ ಗಾಂಧಿ, ಪ್ರಧಾನಿ ಮತ್ತು ಅದಾನಿ ಒಟ್ಟಿಗೆ ಇರುವವರೆಗೂ ಅವರು ಭಾರತದಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ವ್ಯಂಗ್ಯ ಮಾಡಿದರು.

ಕೂಡಲೇ ಅದಾನಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಮತ್ತು ಅವರ "ರಕ್ಷಕ" ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರನ್ನು ತನಿಖೆಗೊಳಪಡಿಸಬೇಕು. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ರಾಹುಲ್ ಗಾಂಧಿ ಹೇಳಿದರು.

ಜಂಟಿ ಸಂಸದೀಯ ಸಮಿತಿ ತನಿಖೆಗೆ ಪ್ರತಿಪಕ್ಷಗಳ ಬೇಡಿಕೆಯೂ ನಿಂತಿದೆ ಎಂದ ಅವರು, ಮೋದಿ ಸರ್ಕಾರವು ಅದಾನಿಯನ್ನು ರಕ್ಷಿಸುತ್ತಿರುವ ಕಾರಣ ಭಾರತದಲ್ಲಿ ಅದಾನಿಯನ್ನು ಬಂಧಿಸುವುದಿಲ್ಲ ಅಥವಾ ತನಿಖೆ ಮಾಡುವುದಿಲ್ಲ ಎಂದು ನಾನು ಖಾತರಿಪಡಿಸುತ್ತೇನೆ. ಯಾವ ಪಕ್ಷ ಅಧಿಕಾರದಲ್ಲಿದ್ದರೂ ತನಿಖೆಗಳು ಎಲ್ಲಾ ರಾಜ್ಯಗಳನ್ನು ಒಳಗೊಂಡಿರಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

ಇನ್ನು ತಮ್ಮ ವಿರುದ್ಧದ ಆರೋಪದ ಬಗ್ಗೆ ಅದಾನಿ ಸಮೂಹ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT