ಹಿಟ್ ಅಂಡ್ ರನ್ 
ದೇಶ

ಪಾಲಕ್ಕಾಡ್ hit-and-run; ಪಾದಾಚಾರಿಗಳಿಗೆ ಗುದ್ದಿ ಕಾರು ಎಸ್ಕೇಪ್.. ಇಬ್ಬರ ದಾರುಣ ಸಾವು!

ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ.

ಕೊಚ್ಚಿನ್: ಕೇರಳದ ಪಾಲಕ್ಕಾಡ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ.

ಪಾಲಕ್ಕಾಡ್‌ನ ಕೊಡುವಾಯೂರಿನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳು ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ರಸ್ತೆ ಮೇಲೆ ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಫುಟ್ ಪಾತ್ ಮೇಲೆ ನಿಂತಿದ್ದ ವ್ಯಕ್ತಿಗಳ ಮೇಲೆ ಏಕಾಏಕಿ ಕಪ್ಪುಬಣ್ಣದ ಕಾರೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ರಭಸಕ್ಕೆ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ 10 ಅಡಿ ಮೇಲೆ ಹಾರಿ ಸುಮಾರು ದೂರಕ್ಕೆ ಹಾರಿ ಬಿದ್ದಿದ್ದಾರೆ.

ಕನಿಷ್ಟ ಪಕ್ಷ ಅವರಿಗೆ ಏನಾಗಿದೆ ಎಂಬುದನ್ನೂ ನೋಡದ ಕಾರು ಚಾಲಕ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಿದ್ದ ರಭಸಕ್ಕೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ದಾಖಲಾಗಿದ್ದ ಈ ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪಾನಮತ್ತ ಕಾರು ಚಾಲಕನ ಬಂಧನ

ಇನ್ನು ಪಾನಮತ್ತನಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ ಚಾಲಕನನ್ನು ಕೇರಳ ಪೊಲೀಸರು ಬಂಧಿಸಿದ್ದು, ಎಳವಂಚೇರಿ ಮೂಲದ ಪ್ರೇಮನಾಥ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT