ಅಗ್ನಿ ದುರಂತ ಸಂಭವಿಸಿರುವುದು. 
ದೇಶ

ಝಾನ್ಸಿ ಆಸ್ಪತ್ರೆ ಅಗ್ನಿ ದುರಂತ ಪ್ರಕರಣ: ಮತ್ತೆರಡು ಮಕ್ಕಳು ಸಾವು; ಸಾವಿನ ಸಂಖ್ಯೆ 17ಕ್ಕೆ ಏರಿಕೆ

ನವೆಂಬರ್ 15 ರ ರಾತ್ರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ಸಹನಗೊಂಡಿದ್ದವು. ಅಲ್ಲದೆ, 39 ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು.

ಲಖನೌ: ‌ಝಾನ್ಸಿ ನಗರದ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡ ಘಟನೆಯಲ್ಲಿ ರಕ್ಷಣೆಗೊಳಗಾಗಿದ್ದ 39 ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಘಟನೆಯಲ್ಲಿ ಮೃತಪಟ್ಟ ಶಿಶುಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ನವೆಂಬರ್ 15 ರ ರಾತ್ರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ಸಹನಗೊಂಡಿದ್ದವು. ಅಲ್ಲದೆ, 39 ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು.

ರಕ್ಷಣೆಗೊಳಗಾದ 39 ಶಿಶುಗಳ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ ನರೇಂದ್ರ ಸಿಂಗ್ ಸೆಂಗಾರ್ ಅವರು ಹೇಳಿದ್ದಾರೆ.

ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿಗೆ ಅನಾರೋಗ್ಯ ಕಾರಣ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ,

ಎರಡೂ ಶಿಶುಗಳ ಜನನ ತೂಕ 800 ಗ್ರಾಂ ಇತ್ತು. ಒಂದು ಮಗುವಿನ ಹೃದಯದಲ್ಲಿ ರಂಧ್ರವಿತ್ತು ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT