ಶರದ್ ಪವಾರ್ TNIE
ದೇಶ

ಅಜಿತ್‌ ಹೆಚ್ಚು ಸ್ಥಾನ ಗೆದ್ದಿರಬಹುದು, ಆದರೆ ಇಡೀ ಮಹಾರಾಷ್ಟ್ರಕ್ಕೆ ಗೊತ್ತು NCP ಸ್ಥಾಪಿಸಿದ್ದು ಯಾರು ಅಂತ: ಶರದ್ ಪವಾರ್

ಮುಂದಿನ ದಿನಗಳಲ್ಲಿ ಜನರ ಮುಂದೆ ಹೋಗುತ್ತೇವೆ ಎಂದು ಹೇಳಿದ ಶರದ್ ಪವಾರ್, ಅಜಿತ್ ಪವಾರ್ ಅವರು ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದಿರಬಹುದು. ಆದರೆ ಎನ್‌ಸಿಪಿ ಸ್ಥಾಪಿಸಿದವರು ಯಾರು ಎಂದು ಇಡೀ ಮಹಾರಾಷ್ಟ್ರಕ್ಕೆ ಗೊತ್ತು ಎಂದು ಹೇಳಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ನಿರಾಶಾದಾಯಕ ಪ್ರದರ್ಶನದ ಬೆನ್ನಲ್ಲೇ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮೊದಲ ಹೇಳಿಕೆ ನೀಡಿದ್ದು ಚುನಾವಣೆ ಫಲಿತಾಂಶಗಳು ನಮ್ಮ ಪ್ರಯತ್ನಗಳಿಗೆ ಅನುಗುಣವಾಗಿಲ್ಲ ಮತ್ತು ಅದರ ಹಿಂದಿನ ಕಾರಣಗಳನ್ನು ಚರ್ಚಿಸಲಾಗುತ್ತದೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಜನರ ಮುಂದೆ ಹೋಗುತ್ತೇವೆ ಎಂದು ಹೇಳಿದ ಶರದ್ ಪವಾರ್, ಅಜಿತ್ ಪವಾರ್ ಅವರು ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದಿರಬಹುದು. ಆದರೆ ಎನ್‌ಸಿಪಿ ಸ್ಥಾಪಿಸಿದವರು ಯಾರು ಎಂದು ಇಡೀ ಮಹಾರಾಷ್ಟ್ರಕ್ಕೆ ಗೊತ್ತು ಎಂದು ಹೇಳಿದರು.

ಮಹಾರಾಷ್ಟ್ರದ ಚುನಾವಣಾ ಫಲಿತಾಂಶದ ಕುರಿತಂತೆ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಚುನಾವಣೆಯಲ್ಲಿ ಮಹಾಯುತಿಯ ಗೆಲುವಿಗೆ ಒಂದು ಕಾರಣವಾಗಿರಬಹುದು ಎಂದು ಹೇಳಿದರು. ತಮ್ಮ ಪಕ್ಷವು ಒಂದು ಭಾಗವಾಗಿರುವ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (MVA) ಎಂದೂ ಅವರು ಹೇಳಿದರು. MVA ರಾಜ್ಯ ಚುನಾವಣೆಗೆ ಹೆಚ್ಚಿನ ಕೆಲಸ ಮಾಡಬೇಕಿತ್ತು. ಶರದ್ ಪವಾರ್ ಅವರು ಲೋಕಸಭೆಯ ಫಲಿತಾಂಶಗಳ ನಂತರ, ನಾವು (MVA) ಹೆಚ್ಚು ವಿಶ್ವಾಸ ಹೊಂದಿತ್ತು. ನಾವು ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ಅನಿಸುತ್ತದೆ ಎಂದು ಹೇಳಿದರು.

ನಾವು ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಇದ್ದೇವೆ. ನಮಗೆ ಅಂತಹ ಅನುಭವ ಎಂದಿಗೂ ಆಗಿರಲಿಲ್ಲ. ಆದರೆ ಈಗ ಅದು ಸಂಭವಿಸಿದೆ. ನಾವು ಅದನ್ನು ಆಲೋಚಿಸುತ್ತೇವೆ. ಮುಂದೆ ಹೊಸ ಚೈತನ್ಯದೊಂದಿಗೆ ಜನರ ಮುಂದೆ ಹೋಗುತ್ತೇವೆ. ನಾನು ಚುನಾವಣಾ ಪ್ರಚಾರದ ಸಮಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಅದು ನನ್ನ ಪಕ್ಷವಾಗಲಿ, ಶಿವಸೇನೆ (ಯುಬಿಟಿ) ಹಾಗೂ ಕಾಂಗ್ರೆಸ್ ಆಗಿರಲಿ, ಎಲ್ಲರೂ ಸಾಮೂಹಿಕ ಪ್ರಯತ್ನಗಳನ್ನು ಮಾಡಿದ್ದೇವೆ. ಆದರೆ ಫಲಿತಾಂಶಗಳು ನಮ್ಮ ಪ್ರಯತ್ನಕ್ಕೆ ಅನುಗುಣವಾಗಿಲ್ಲ, ಎಲ್ಲಿಯೂ ಸಮನ್ವಯದ ಕೊರತೆಯಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನಗಳನ್ನು ಗೆದ್ದಿದ್ದರೆ, ಮಹಾ ವಿಕಾಸ್ ಅಘಾಡಿ ಕೇವಲ 50 ಸ್ಥಾನಗಳನ್ನು ಗೆದ್ದಿದೆ. ಮಹಾಯುತಿ ಸೇರಿದಂತೆ ಬಿಜೆಪಿ 132 ಸ್ಥಾನಗಳನ್ನು, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT