ಅಜಿತ್ ಪವಾರ್ 
ದೇಶ

ಮಹಾರಾಷ್ಟ್ರ: NCP ಶಾಸಕಾಂಗ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಆಯ್ಕೆ

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಗಿದೆ.

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು.

ಪಾಟೀಲ್ ಅವರು ಶಾಸಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡಲಿದ್ದು, ಅಧಿವೇಶನಗಳಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಲು ಅವರ ಮನವಿಗಳನ್ನು ಪರಿಹರಿಸುತ್ತಾರೆ. ಎನ್‌ಸಿಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 288 ಸ್ಥಾನಗಳಲ್ಲಿ 233 ಸ್ಥಾನಗಳನ್ನು ಗಳಿಸುವ ಮೂಲಕ ಅದ್ಭುತ ಪ್ರದರ್ಶನವನ್ನು ನೀಡಿವೆ.

NCP ಅಜಿತ್ ಪವಾರ್ ಬಣ ಸ್ಪರ್ಧಿಸಿದ 59 ಸ್ಥಾನಗಳಲ್ಲಿ 41 ಸ್ಥಾನಗಳನ್ನು ಪಡೆದಿದೆ. ಅದರ ಪ್ರತಿಸ್ಪರ್ಧಿ ಬಣವಾದ ಎನ್‌ಸಿಪಿ (ಎಸ್‌ಪಿ)ಯನ್ನು 29 ಸ್ಥಾನಗಳಲ್ಲಿ ಸೋಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ. ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿ ಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

SCROLL FOR NEXT