ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ 
ದೇಶ

'ಮಹಾ' ಮುಖ್ಯಮಂತ್ರಿ ಪಟ್ಟಕ್ಕೆ ಶಿವಸೇನೆ-ಬಿಜೆಪಿ ಕಸರತ್ತು: ಫಡ್ನವೀಸ್-ಶಿಂಧೆ ನಡುವೆ ತೀವ್ರ ಪೈಪೋಟಿ; ಯಾರಾಗ್ತಾರೆ ಸಿಎಂ?

ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ಮುಂಬೈ: ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಿದ್ಧತೆ ಆರಂಭಿಸಿದೆ.

ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ನವೆಂಬರ್ 26 ಪ್ರಸಕ್ತ ವಿಧಾನಸಭೆ ಅವಧಿಯ ಕೊನೆಯ ದಿನವಾಗಿರುವುದರಿಂದ ಮಂಗಳವಾರ ಸಂಜೆಯೇ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಸಮಾರಂಭ ಒಂದು ದಿನ ತಡವಾದರೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಶಿವಸೇನೆ ನಾಯಕ ದೀಪಕ್ ಕೇಸರ್ಕರ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ, ಆದರೆ ಬಿಜೆಪಿ ಮೂಲಗಳು ಅದನ್ನು ನಿರಾಕರಿಸಿವೆ.

ಬಿಜೆಪಿ ಮತ್ತು ಮಿತ್ರಪಕ್ಷಗಳು ಸೋಮವಾರ ಸಭೆ ಸೇರಿ ಸಿಎಂ ಆಯ್ಕೆಯ ಬಗ್ಗೆ ತಮ್ಮ ನಿರ್ಧಾರವನ್ನು ಅಂತಿಮಗೊಳಿಸಲಿವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಈ ನಡುವೆ ಮೈತ್ರಿಕೂಟದ ಮೂರು ಪಕ್ಷಗಳ ನಾಯಕರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಜಾತಿ ಸಮೀಕರಣ, ಮರಾಠ, ಒಬಿಸಿ ಸಮುದಾಯಗಳನ್ನು ಗಮನದಲ್ಲಿ ಇಟ್ಟುಕೊಂಡ ಹೊಸ ನಾಯಕನ ಅಯ್ಕೆಗೆ ಬಿಜೆಪಿ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿರುವ ದೇವೇಂದ್ರ ಫಡ್ನವಿಸ್‌ ರೇಸ್‌ನಲ್ಲಿ ಮುಂದಿದ್ದಾರೆ. ಹಾಲಿ ಸಿಎಂ ಏಕನಾಥ್‌ ಶಿಂಧೆ, ಎನ್‌ಸಿಪಿಯ ಅಜಿತ್‌ ಪವಾರ್‌ ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಮೈತ್ರಿಕೂಟದಲ್ಲಿ ಅತ್ಯಧಿಕ 133 ಸ್ಥಾನ ಗಳಿಸಿರುವ ಬಿಜೆಪಿ ನಾಯಕರೇ ಮುಖ್ಯಮಂತ್ರಿ ಆಗಬೇಕು ಎಂಬುದು ಪಕ್ಷದ ನಾಯಕರಾದಿಯಾಗಿ ಸಂಘ ಪರಿವಾರದ ಆಶಯವಾಗಿದೆ. ದೇವೇಂದ್ರ ಫಡ್ನವಿಸ್‌ ಅವರೇ ಸಿಎಂ ಆಗಲಿ ಎಂಬುದು ಬೆಂಬಲಿಗರ ವಾದವೂ ಆಗಿದೆ. ಆದರೆ, ಮೈತ್ರಿ ಧರ್ಮ, ಜಾತಿ ಸಮೀಕರಣದ ಸಂಕಟಗಳು ಫಡ್ನವಿಸ್‌ಗೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ.

ಮರಾಠ ಸಮುದಾಯದ ಬೆಂಬಲ ಹಿಡಿದಿಟ್ಟುಕೊಳ್ಳಲು ಶಿಂಧೆಯನ್ನೇ ಮುಂದುವರಿಸಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದಲ್ಲಿ, ಫಡ್ನವಿಸ್‌ ಮತ್ತೆ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡಬೇಕಾಗಬಹುದು ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ. ಮತ್ತೊಂದೆಡೆ, ಚುನಾವಣಾ ಆಯೋಗದಿಂದ ನೂತನ ಶಾಸಕರ ಪಟ್ಟಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ.

ಒಂದು ವೇಳೆ ಹೊಸ ಸರ್ಕಾರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಆಯ್ಕೆ ಮಾಡಿದ್ದೇ ಆದರೆ, ಗೃಹ ಇಲಾಖೆಯನ್ನು ಏಕನಾಥ್ ಶಿಂಧೆಗೆ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ನವೆಂಬರ್ 26 ಮಂಗಳವಾರ, ಸಂವಿಧಾನ ದಿನ ನಿಮಿತ್ತ ಸಂಸತ್ತಿನಲ್ಲಿ ಜಂಟಿ ಅಧಿವೇಶನವಿದೆ. ನಂತರ ಪ್ರಧಾನಿ ಮೋದಿ ಮತ್ತು ಇತರ ಹಿರಿಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬೈಗೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರವೇ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರತಿ ಪಕ್ಷಕ್ಕೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ಸ್ಥಳವನ್ನು ನಿರ್ಧರಿಸಲಾಗಿಲ್ಲ. ಆದರೆ, ವಾಂಖೆಡೆ ಸ್ಟೇಡಿಯಂ ಅಥವಾ ಶಿವಾಜಿ ಪಾರ್ಕ್ ನಲ್ಲಿ ನಡೆಯಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT